Advertisement

ಬೀದರ್ ಬಸವೇಶ್ವರ ವೃತ್ತದಲ್ಲಿ ಬಸವ ಜಯಂತಿ ಆಚರಣೆ

01:20 PM Apr 26, 2020 | keerthan |

ಬೀದರ್: ಇಲ್ಲಿನ ಬಸವೇಶ್ವರ ವೃತ್ತದಲ್ಲಿ ಜಿಲ್ಲಾಡಳಿತದಿಂದ ಶ್ರೀ ಗುರು ಬಸವಣ್ಣನನವರ ಜಯಂತಿ ಆಚರಿಸಲಾಯಿತು.

Advertisement

ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಅವರು ಪುತ್ಥಳಿಗೆ ಮಾಲಾರ್ಪಣೆ, ಷಟಸ್ಥಲ ಧ್ವಜ ಹಾರಿಸಿದರು. ಬಸವಣ್ಣನ ತತ್ವ ಸಿದ್ದಾಂತಗಳನ್ನು ಬದುಕಿನಲ್ಲಿ ಅನುಕರಣೆ ಮಾಡಬೇಕು. ಲಾಕ್ ಡೌನ್ ಸಂದಿಗ್ಧ ಸ್ಥಿತಿಯಲ್ಲಿ ಪ್ರತಿಯೊಬ್ಬರು ಬಸವಾದಿ ಶರಣರ ವಚನಗಳನ್ನು ಓದಿ ಮನೆಯಲ್ಲೇ ಜಯಂತಿ ಆಚರಿಸಬೇಕೆಂದು ಮನವಿ ಮಾಡಿದರು.

ಸಂಸದ ಭಗವಂತ ಖೂಬಾ, ಅಕ್ಕ ಅನ್ನಪೂರ್ಣ ತಾಯಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next