Advertisement

2ಎ ಮೀಸಲಾತಿ ಹೋರಾಟ ವಿಚಾರ: ಸಿಎಂ ಭೇಟಿಯಾದ ಜಯ ಮೃತ್ಯುಂಜಯ ಸ್ವಾಮೀಜಿ

11:51 AM Oct 01, 2021 | Team Udayavani |

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಜಯ ಮೃತ್ಯುಂಜಯ ಸ್ವಾಮೀಜಿ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

Advertisement

ಬಳಿಕ ಮಾತನಾಡಿದ ಜಯ ಮೃತ್ಯುಂಜಯ ಸ್ವಾಮೀಜಿ, ಮುಖ್ಯಮಂತ್ರಿಗಳು ಹೋರಾಟ ಕೈ ಬಿಡಿ ಎಂದು ಮನವಿ ಮಾಡಿದ್ದಾರೆ. ಮೀಸಲಾತಿ ಸಂಬಂಧವೂ ಕೆಲ ವಿಷಯಗಳನ್ನು ಹೇಳಿದ್ದಾರೆ. ಇದರ ಬಗ್ಗೆ ವಿದ್ಯಾ ಭವನದಲ್ಲಿ ನಡೆಯಲಿರುವ ಸಭೆಯಲ್ಲಿ ತಿಳಿಸುತ್ತೇವೆ ಎಂದರು.

ಇದನ್ನೂ ಓದಿ:ಸಿದ್ದರಾಮಯ್ಯನವರನ್ನು ನಾನೇ ಆರ್ ಎಸ್ಎಸ್ ಶಾಖೆಗೆ ಕರೆದುಕೊಂಡು ಹೋಗುತ್ತೇನೆ: ಸಚಿವ ಸೋಮಶೇಖರ್

ನಮ್ಮ ಜನಪ್ರತಿನಿದಿಗಳು ಏನು ಹೇಳುತ್ತಾರೋ ಅದರ ಆಧಾರದ ಮೇಲೆ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ. ನಾವು ಇನ್ನೂ ಬಸನಗೌಡ ಪಾಟೀಲ್ ಯತ್ನಾಳ್ ಜೊತೆಗೂ ಚರ್ಚೆ ಮಾಡಬೇಕು. ಹೀಗಾಗಿ ಅವರ ಜೊತೆ ಚರ್ಚಿಸಿ, ಮುಂದಿನ ತಮ್ಮ‌ ನಡೆ ಏನೆಂಬುದರ ಬಗ್ಗೆ ತೀರ್ಮಾನ ಮಾಡುತ್ತೇವೆ. ಆ ಸಭೆಯಲ್ಲಿ ಸರ್ಕಾರದ ಉತ್ತರವನ್ನು ಸಚಿವ ಸಿಸಿ ಪಾಟೀಲ್ ಪ್ರಕಟ ಮಾಡಲಿದ್ದಾರೆ ಎಂದು ಸ್ವಾಮೀಜಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next