Advertisement

Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ

11:23 AM Jul 26, 2024 | keerthan |

ವಿಜಯಪುರ: ಜಿಲ್ಲೆಯ ಬಸವಮಬಾಗೇವಾಡಿ ಪಟ್ಟಣದಲ್ಲಿ ರಸ್ತೆಬದಿಯ ಗೂಡಂಗಡಿ ತೆರವು ಕಾರ್ಯಾಚರಣೆ ಮುಂದುವರೆದಿದೆ.

Advertisement

ಶುಕ್ರವಾರ ಬೆಳಿಗ್ಗೆ ಜೆಸಿಬಿ ಯಂತ್ರಗಳೊಂದಿಗೆ ತೆರವು ಕಾರ್ಯಾಚರಣೆಗಾಗಿ ರಸ್ತೆಗಿಳಿದ ಪುರಸಭೆ ಮುಖ್ಯಾಧಿಕಾರಿ ಹುಚ್ಚೇಶ ಚಿತ್ತರಗಿ, ಆರೋಗ್ಯ ನಿರೀಕ್ಷಕ ಮಹೇಶ ಹಿರೇಮಠ ನೇತೃತ್ವದಲ್ಲಿ ತೆರವು ಕಾರ್ಯಾಚರಣೆ ನಡೆಸಿದರು.

ಮುನ್ಸೂಚನೆ ನೀಡದೆ ಪುರಸಭೆ ಅಧಿಕಾರಿಗಳು ಬೀದಿಬದಿ ವ್ಯಾಪಾರಿಗಳ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ. ಬೀದಿಬದಿ ವ್ಯಾಪಾರಿಗಳಲ್ಲಿ ಬಹುತೇಕರು ಗೂಡಂಗಡಿ ಉಪಹಾರ ತಯಾರಕರೇ ಇದ್ದು, ಏಕಾಏಕಿ ತೆರವು ಕಾರ್ಯಾಚರಣೆ ಆರಂಭಿಸಿರುವುದರಿಂದ ಹತ್ತಾರು ಸಾವಿರ ರೂ. ಮೌಲ್ಯದ ಆಹಾರ ನಷ್ಟವಾಗಿದೆ ಎಂದು ವ್ಯಾಪಾರಿಗಳು ಆಕ್ರೋಶ ಹೊರ ಹಾಕುತ್ತಿದ್ದಾರೆ.

ಪುರಸಭೆ ಅಧಿಕಾರಿಗಳ ನಡೆಯಿಂದ ಬೀದಿಬದಿ ವ್ಯಾಪಾರಿಗಳು ಭಾರಿ ನಷ್ಟವಾಗಿದ್ದು, ಜೀವನಕ್ಕೆ ಆಧಾರವಾಗಿದ್ದ ಉದ್ಯೋಗಕ್ಕೆ ಸಂಚಕಾರ ತಂದಿದ್ದಾರೆ. ಈ ಅನ್ಯಾಯದ ವಿರುದ್ಧ ಹೋರಾಟ ಮಾಡುವುದಾಗಿ ಎಚ್ಚರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next