Advertisement

ಚುನಾವಣೆ ಮರೆತು ನಗರದಲ್ಲಿ ಸೈಕಲ್ ತುಳಿಯುತ್ತಿರುವ ಶಾಸಕ ಯತ್ನಾಳ!

09:45 AM Nov 25, 2019 | keerthan |

ವಿಜಯಪುರ: ನೆರೆಯ ಜಿಲ್ಲೆಯ ಹಲವು ಕ್ಷೇತ್ರಗಳಲ್ಲಿ ವಿಧಾನಸಭೆ ಚುನಾವಣೆ ಕಾವು ಇದ್ದರೂ ಯಾವುದಕ್ಕೂ ತಲೆ ಕೆಡಿಸಿಕೊಳ್ಳದ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಯುವಕರೊಂದಿಗೆ ಸೈಕಲ್ ತುಳಿಯುತ್ತಿದ್ದಾರೆ.

Advertisement

ಪಕ್ಕದ ಬೆಳಗಾವಿ ಜಿಲ್ಲೆಯ ಅಥಣಿ, ಕಾಗವಾಡ, ಗೋಕಾಕ ವಿಧಾನಸಭೆ ಕ್ಷೇತ್ರದಲ್ಲಿ ಉಪ ಚುನಾವಣೆ ಕಾವು ಜೋರಾಗಿದೆ.  ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ತೊಡಗುವಂತೆ ಸಿ.ಎಂ. ಯಡಿಯೂರಪ್ಪ ಎಲ್ಲ ನಾಯಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರೂ ಇದಕ್ಕೆಲ್ಲ ತಲೆ ಕೆಡಿಸಿಕೊಳ್ಳದ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ನಗರದಲ್ಲಿ ಯುವಕರೊಂದಿಗೆ ಸೈಕಲ್ ಸವಾರಿ ನಡೆಸಿದ್ದಾರೆ.

ಪರಿಸರ ಜಾಗೃತಿಗಾಗಿ ಕಳೆದ ಕೆಲ ತಿಂಗಳಿಂದ ಸೈಕಲ್ ಸವಾರಿ ಆರಂಭಿಸಿರುವ ಡಾ.ಮಹಾಂತೇಶ ಬಿರಾದಾರ ನೇತೃತ್ವದ ತಂಡಕ್ಕೆ ಸ್ಫೂರ್ತಿ ನೀಡಲು ಶಾಸಕ ಯತ್ನಾಳ, ತಾವೂ ಸೈಕಲ್ ಸವಾರಿ ನಡೆಸಿದರು.

ಐತಿಹಾಸಿಕ ಗೋಲಗುಮ್ಮಟ ಸ್ಮಾರಕ ಆವರಣದಿಂದ ಆರಂಭಗೊಂಡು ನಗರದ ವಿವಿಧ ಪ್ರದೇಶದಲ್ಲಿ ಸೈಕಲ್ ತುಳಿಯುತ್ತ ಸಾಗಿ, ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣ ದಲ್ಲಿ ಮುಕ್ತಾಯ ಕಂಡಿತು.

ಪಾಲಿಕೆ ಆಯುಕ್ತ ಹರ್ಷಾ ಶೆಟ್ಟಿ, ಸ್ವಾಮಿ ವಿವೇಕಾನಂದ ಸಂಸ್ಥೆಯ ರಾಘವ ಅಣ್ಣಿಗೇರಿ ಸೇರಿದಂತೆ ನೂರಾರು ಯುವಕರು ಸೈಕಲ್ ತುಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next