Advertisement

ಬಸವಣ್ಣನ ತತ್ವ -ಸಿದ್ದಾಂತ ಸಮಾಜಕ್ಕೆ ಮಾರ್ಗದರ್ಶಿ

10:04 AM May 04, 2022 | Team Udayavani |

ಚಿತ್ತಾಪುರ: ಹನ್ನೆರಡನೇ ಶತಮಾನದ ಬಸವಣ್ಣನವರು ಪ್ರತಿಪಾದಿಸಿದ ತತ್ವ ಸಿದ್ದಾಂತಗಳು ಮಾನವ ಸಮಾಜಕ್ಕೆ ಮಾರ್ಗದರ್ಶಕವಾಗಿ ಬೆಳಕನ್ನು ಬೀರುವಂತಿವೆ ಎಂದು ತೊನಸನಳ್ಳಿ.ಎಸ್‌ ಅಲ್ಲಂಪ್ರಭು ಪೀಠದ ಶ್ರೀ ಮಲ್ಲಣ್ಣಪ್ಪ ಸ್ವಾಮೀಜಿ ಹೇಳಿದರು.

Advertisement

ಪಟ್ಟಣದ ಬಜಾಜ್‌ ಕಲ್ಯಾಣ ಮಂಟಪದಲ್ಲಿ ಬಸವ ಜಯಂತಿ ನಿಮಿತ್ತ ಹಮ್ಮಿಕೊಂಡಿದ್ದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಅವರು ಮಾತನಾಡಿದರು.

ಅಸಮಾನತೆಯ ವಿರುದ್ಧ ಸಮಾಜದ ಕ್ರಾಂತಿಕಾರಿ ಬದಲಾವಣೆಯಲ್ಲಿ ಬಸವಣ್ಣನವರ ಕೊಡುಗೆ ಅಪಾರ. ಸಮಾಜದಲ್ಲಿ ಜಾತಿ ಪದ್ಧತಿ ನಿರ್ಮೂಲನೆ ಮಾಡಿ ಸಾಮಾಜಿಕ ನ್ಯಾಯಕ್ಕೆ ಹೋರಾಡಿ ಇಡೀ ಮನುಕುಲಕ್ಕೆ ದಾರಿ ದೀಪವಾಗಿದ್ದಾರೆ. ಬಸವಣ್ಣನವರ ಕಾಯಕ ತತ್ವವನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಸಿಕೊಳ್ಳಬೇಕು ಎಂದು ಹೇಳಿದರು.

ಪ್ರಸ್ತುತ ಕಾಲದಲ್ಲಿ ಪ್ರತಿಷ್ಠೆಗೆ ಒಳಗಾಗಿ ಸಿಕ್ಕಾಪಟ್ಟಿ ಹಣ ಖರ್ಚು ಮಾಡಿ ಅದ್ಧೂರಿ ಮದುವೆ ಮಾಡುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆಯಲ್ಲಿ ವಿನಾಕಾರಣ ದುಂದು ವೆಚ್ಚ ಮಾಡದೇ ಇಂತಹ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಉಚಿತ ಮದುವೆ ಮಾಡಿಕೊಂಡು ಸುಖ ಸಂಸಾರದ ಜೀವನ ಸಾಗಿಸಬೇಕು. ಈ ನಿಟ್ಟಿನಲ್ಲಿ ಚಿತ್ತಾಪುರಲ್ಲಿ ಕಳೆದ ಎಂಟು ವರ್ಷಗಳಿಂದ ಸಾಮೂಹಿಕ ವಿವಾಹ ಕಾರ್ಯಕ್ರಮ ಮಾಡುತ್ತಿರುವ ನಾಗರೆಡ್ಡಿ ಪಾಟೀಲ ಕರದಾಳ ಮತ್ತು ಅವರ ತಂಡದ ಕಾರ್ಯ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಒಂಬತ್ತು ನವಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ತಹಶೀಲ್ದಾರ್‌ ಉಮಾಕಾಂತ ಹಳ್ಳೆ, ಸಿಪಿಐ ಪ್ರಕಾಶ ಯಾತನೂರ, ದಿಗ್ಗಾಂವ ಶ್ರೀ ಸಿದ್ದವೀರ ಶಿವಾಚಾರ್ಯರು, ದಂಡಗುಂಡ ಶ್ರೀ ಸಂಗನಬಸವ ಶಿವಾಚಾರ್ಯರು, ಅಳ್ಳೋಳ್ಳಿ ಶ್ರೀ ಸಂಗಮನಾಥ ಸ್ವಾಮೀಜಿ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಭೀಮಣ್ಣ ಸಾಲಿ, ಎಪಿಎಂಸಿ ಅಧ್ಯಕ್ಷ ಸಿದ್ದುಗೌಡ ಅಫಜಲಪುರ, ಪುರಸಭೆ ಅಧ್ಯಕ್ಷ ಮಲ್ಲಿಕಾರ್ಜುನ ಕಾಳಗಿ, ಮುಖಂಡರಾದ ಶಿವಾನಂದ ಪಾಟೀಲ, ರಮೇಶ ಮರಗೋಳ, ಬಸವರಾಜ ಬೆಣ್ಣೂರಕರ್‌, ಅಣ್ಣಾರಾವ ಪಾಟೀಲ ಮುಡಬೂಳ, ಚಂದ್ರಶೇಖರ ಸಾತನೂರ, ಡಾ| ಚಂದ್ರಶೇಖರ ಕಾಂತಾ, ಎಸ್‌. ಎನ್‌. ಪಾಟೀಲ, ಗೋಪಾಲ ರಾಠೊಡ, ವೀರಣ್ಣಗೌಡ ಪರಸರೆಡ್ಡಿ, ಅರವಿಂದ ಚವ್ಹಾಣ, ಶರಣಪ್ಪ ನಾಟೀಕಾರ, ನಾಗರಾಜ ಭಂಕಲಗಿ, ವಿನೋದ ಗುತ್ತೇದಾರ, ಬಸವರಾಜ ಚಿನ್ನಮಳ್ಳಿ, ಅಶೋಕ ನಿಪ್ಪಾಣಿ, ರಾಮರೆಡ್ಡಿ, ನಾಗರೆಡ್ಡಿ ಗೋಪಸೇನ್‌, ರವೀಂದ್ರರೆಡ್ಡಿ ಭಂಕಲಗಿ, ಯಂಕಪ್ಪ ಜೋಲಕರ್‌, ರಾಜಣ್ಣ ಕರದಾಳ, ಅಂಬರೀಶ ಸುಲೇಗಾಂವ, ಆನಂದ ಪಾಟೀಲ ನರಬೋಳ, ಐಲರೆಡ್ಡಿ ಅಳ್ಳೋಳ್ಳಿ, ಗಿರೀಶ ಪಾಲಪ್‌, ಇತರರು ಇದ್ದರು. ಸಮಿತಿ ಅಧ್ಯಕ್ಷ ನಾಗರೆಡ್ಡಿ ಪಾಟೀಲ ಕರದಾಳ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಶಾಂತಣ್ಣ ಚಾಳೀಕಾರ ನಿರೂಪಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next