Advertisement
ನಗರದ ಶ್ರೀ ಹುಕ್ಕೇರಿಮಠದ ಶಿವಾನುಭವ ಮಂಟಪದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶ್ರೀ ಹುಕ್ಕೇರಿ ಮಠ ಮತ್ತು ಹೊಸಮಠದ ಸಹಯೋಗದಲ್ಲಿ ಜರುಗಿದ ಮಹಾನ್ ಮಾನವತಾವಾದಿ, ಸಮಾಜ ಸುಧಾರಕ ಶ್ರೀ ಜಗಜ್ಯೋತಿ ಬಸವೇಶ್ವರ ಜಯಂತಿಗೆ ಚಾಲನೆ ನೀಡಿ ಅವರು ಮಾತನಾಡಿದರು.
Related Articles
Advertisement
ವ್ಯಕ್ತಿತ್ವ, ನಾಗರಿಕತೆ, ವಿಜ್ಞಾನದ ಪ್ರತಿಪಾದಕರಾಗಿದ್ದರು. ಬಸವಣ್ಣ ಸಾಮಾನ್ಯ ವ್ಯಕ್ತಿಯಲ್ಲ, ವಿಶ್ವಗುರು. ಜಾತಿ, ವರ್ಗ ರಹಿತ ಪ್ರಜಾಪ್ರಭುತ್ವ ತಂದ ಮಹಾನ್ ಚೇತನ. ಬಸಣ್ಣನವರ ತತ್ವಗಳು, ಆದರ್ಶಗಳು ಬೆಳಗಲಿ. ಧರ್ಮದ ಧ್ವಜ ಕೆಳಗಿಳಿದು ಕಾಯಕದ ಧ್ವಜ ಮೇಲೆ ಹಾರಲಿ. ಇಂದಿನ ಯುವಕರು ಡಿಜೆ ಹಾಕಿ ನೃತ್ಯ ಮಾಡುವ ಬದಲು ವ್ಯಸನಮುಕ್ತರಾಗಿ ಕಾಯಕದಲ್ಲಿ ತೊಡಗಿಸಿಕೊಂಡು ಸದೃಢ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕೆಂದರು. ಸಾನ್ನಿಧ್ಯ ವಹಿಸಿದ್ದ ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಆಶೀರ್ವಚನ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಅಪರ ಜಿಲ್ಲಾಧಿಕಾರಿ ಡಾ.ಎನ್ .ತಿಪ್ಪೇಸ್ವಾಮಿ, ಅಬಕಾರಿ ಉಪ ಆಯುಕ್ತರಾದ ಶೈಲಜಾ, ತಹಶೀಲ್ದಾರ್ ಎನ್.ಬಿ.ಗೆಜ್ಜಿ ಇತರರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಶಶಿಕಲಾ ಹುಡೇದ ಸ್ವಾಗತಿಸಿದರು.
ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ: ಕಾರ್ಯಕ್ರಮದ ಮೊದಲು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಅವರು ನಗರದ ಶ್ರೀ ಬಸವೇಶ್ವರ ವೃತ್ತದಲ್ಲಿರುವ ಶ್ರೀ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಹಾಗೂ ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಮಾಜಿ ಸಚಿವ ರುದ್ರಪ್ಪ ಲಮಾಣಿ, ಜಿಪಂ ಮಾಜಿ ಅಧ್ಯಕ್ಷ ಪರಮೇಶಪ್ಪ ಮೇಗಳಮನಿ, ಪ್ರಭು ಹಿಟ್ನಳ್ಳಿ ಇತರ ಮುಖಂಡರು, ಅಧಿಕಾರಿಗಳು ಇದ್ದರು.