Advertisement

ಐಎಂಎ ಪ್ರಕರಣದಲ್ಲಿ 475 ಕೋಟಿ ರೂ. ವಶ :  ಸಚಿವ ಬಸವರಾಜ ಬೊಮ್ಮಾಯಿ ಹೇಳಿಕೆ

01:56 AM Feb 05, 2021 | Team Udayavani |

ವಿಧಾನ ಪರಿಷತ್‌: ಐಎಂಎ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಿಂದ 475 ಕೋಟಿ ರೂ. ವಶಪಡಿಸಿಕೊಳ್ಳಲಾಗಿದೆ. ಆದರೆ, ಅದನ್ನು ಠೇವಣಿದಾರರಿಗೆ ವಿತರಿಸಲು ಸಾಧ್ಯವಾಗದ ಸ್ಥಿತಿಯಲ್ಲಿ ನಮ್ಮ ವ್ಯವಸ್ಥೆಯಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

Advertisement

ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ (ತಿದ್ದುಪಡಿ) ವಿಧೇಯಕದ ಚರ್ಚೆ ವೇಳೆ ಮಾತನಾಡಿದ ಅವರು, ಜನಸಾಮಾನ್ಯರಿಗೆ ಹೆಚ್ಚಿನ ಬಡ್ಡಿ ನೀಡುವುದಾಗಿ ನಂಬಿಸಿ ಹಣಕಾಸು ಸಂಸ್ಥೆಗಳು ಠೇವಣಿ ಪಡೆದು ಮೋಸ ಮಾಡುವ ಪ್ರಕರಣಗಳ ಸಂಖ್ಯೆ ಹೆಚ್ಚಾಗಿವೆ. ಬೆಂಗಳೂರಿನ ಐಎಂಎನಲ್ಲಿ 2,700 ಕೋಟಿ ರೂ. ಠೇವಣಿ ಇಡಲಾಗಿದ್ದು, ಈಗಾಗಲೇ 475 ಕೋಟಿ ರೂ. ವಶಪಡಿಸಿಕೊಳ್ಳಲಾಗಿದೆ ಎಂದರು.

ಠೇವಣಿದಾರರ ಹಣವನ್ನು ಸರಿಯಾದ ಉದ್ದೇಶಕ್ಕೆ ಬಳಸಿಕೊಳ್ಳದೇ ಅನ್ಯಾಯ ಎಸಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದಕ್ಕೆ ಕಡಿವಾಣ ಹಾಕಬೇಕಾಗಿದೆ. ಈ ನಿಟ್ಟಿನಲ್ಲಿ ಕರ್ನಾಟಕ ಹಣಕಾಸು ಸಂಸ್ಥೆ§ಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ ತಿದ್ದುಪಡಿ ತರಲಾಗುತ್ತಿದೆ. ಅಲ್ಲದೆ, ಕೇಂದ್ರಸರ್ಕಾರವೂ ಈ ಸಂಬಂಧ ಕಠಿಣ ಕಾನೂನು ತಂದಿದೆ. ಅದರ ನೀತಿ, ನಿಯಮಗಳನ್ನು ಅನುಷ್ಠಾನಕ್ಕೆ ಬರಲಿದ್ದೇವೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next