Advertisement

Basavaraj Bommai: ನಮಗೆ ಕಾಂಗ್ರೆಸ್‌ ನೇರ ಎದುರಾಳಿ

12:11 AM Oct 26, 2024 | Team Udayavani |

ಶಿಗ್ಗಾಂವಿ: ಕ್ಷೇತ್ರದಲ್ಲಿ ಕಾಂಗ್ರೆಸ್‌ ಯಾರನ್ನೇ ಅಭ್ಯರ್ಥಿ ಮಾಡಿದರೂ ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ ನಮಗೆ ನೇರ ಎದುರಾಳಿ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Advertisement

ಸುದ್ದಿಗಾರರ ಜತೆ ಮಾತನಾಡಿ, ಈ ಉಪ ಚುನಾವಣೆಯಲ್ಲಿ ಭರತ್‌ ಬೊಮ್ಮಾಯಿಗೆ ನನಗಿಂತ ಹೆಚ್ಚಿನ ದೊಡ್ಡ ಬೆಂಬಲ ದೊರೆಯುತ್ತದೆ. ದೊಡ್ಡ ಅಂತರದಲ್ಲಿ ಭರತ್‌ ಗೆಲ್ಲುವ ವಿಶ್ವಾಸ ಇದೆ. ಈ ಬಾರಿ ನಮಗೆ ಅತೀ ಹೆಚ್ಚು ಜನ ಬೆಂಬಲ ದೊರೆಯುತ್ತದೆ. ಭರತ್‌ ಬೊಮ್ಮಾಯಿ ನನಗಿಂತ ಹೆಚ್ಚು ಮತ ಪಡೆಯುತ್ತಾರೊ ಇಲ್ಲವೊ ಎಂದು ನಾನು ಭವಿಷ್ಯ ಹೇಳುವುದಿಲ್ಲ. ಆದರೆ ಅತೀ ಹೆಚ್ಚು ಅಂತರದಿಂದ ಗೆಲುವು ಸಾಧಿಸುತ್ತಾರೆ ಎನ್ನುವ ವಿಶ್ವಾಸ ಇದೆ. ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಶಿಗ್ಗಾಂವಿ, ಸಂಡೂರು ಬಿಜೆಪಿ ಗೆಲ್ಲುತ್ತದೆ. ಚನ್ನಪಟ್ಟಣದಲ್ಲಿ ಎನ್‌ಡಿಎ ಗೆಲುವು ಸಾಧಿಸುತ್ತದೆ ಎಂದರು.

ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಿ.ಪಿ. ಯೋಗೇಶ್ವರ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ನಿಂತರೂ ಗೆಲ್ಲುವುದಿಲ್ಲ ಎನ್ನುವ ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್‌ನಲ್ಲಿ ಸರಿಯಾದ ಅಭ್ಯರ್ಥಿ ಹುಡುಕಲಿಕ್ಕೆ ಆಗಲಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next