Advertisement

ವಿದ್ಯಾರ್ಥಿಗಳನ್ನು ಬಳಸಿ ಧರ್ಮಗಳ ನಡುವೆ ವೈಷಮ್ಯ ಬೆಳೆಸುವ ಕೆಲಸ ನಡೆಯುತ್ತಿದೆ: ಬೊಮ್ಮಾಯಿ

10:14 AM Feb 23, 2020 | keerthan |

ದಾವಣಗೆರೆ: ರಾಜ್ಯ ಹಾಗೂ ದೇಶದಲ್ಲಿ ಹೊಸ ಬೆಳವಣಿಗೆ ನಡೆಯುತ್ತಿದೆ‌. ವಿದ್ಯಾರ್ಥಿಗಳನ್ನು ಬಳಕೆ ಮಾಡಿ ಸಮಾಜದಲ್ಲಿ ಅಶಾಂತಿ ಉಂಟು ಮಾಡುವ, ಧರ್ಮಗಳ ನಡುವೆ ವೈಷಮ್ಯ ಬೆಳೆಸುವ ಕೆಲಸ ನಡೆಯುತ್ತಿದೆ. ಇಂತಹ ಶಕ್ತಿಗಳನ್ನು ಮೊಟಕುಗೊಳಿಸಬೇಕಿದೆ ಎಂದು ಗೃಹ ಸಚಿವ ಬಸವರಾಜ್‌‌ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

Advertisement

ದಾವಣಗೆರೆಯಲ್ಲಿ ಮಾತನಾಡಿದ ಅವರು ನಾಳೆ ಹಿರಿಯ ಅಧಿಕಾರಿಗಳ ಸಭೆ ಕರೆದಿದ್ದೇನೆ ಎಂದರು. ಕೆಲ ಸಂಘಟನೆಗಳು ಇಂತಹ ಕುಮ್ಮಕ್ಕು ನೀಡುತ್ತಿದ್ದು, ಅಂತಹ ಸಂಘಟನೆ, ವ್ಯಕ್ತಿಗಳನ್ನು ಬೇರು ಸಮೇತ ಕಿತ್ತು ಹಾಕಬೇಕಿದೆ ಎಂದರು.

ಕಲಬುರ್ಗಿಲ್ಲಿ ಮಹಾರಾಷ್ಟ್ರದ ಮಾಜಿ ಶಾಸಕ ಪಠಾಣ್ ವಿವಾದಾತ್ಮಕ ಹೇಳಿಕೆ ಪ್ರಕರಣದ ಬಗ್ಗೆ ಕೇಳಲಾದ ಪ್ರಶ್ನಗೆ ಉತ್ತರಿಸಿದ ಸಚಿವರು, ಈ ಬಗ್ಗೆ ಪ್ರಕರಣ ದಾಖಲಾಗಿದೆ, ತನಿಖೆ ನಡೆಯುತ್ತಿದೆ. ಘಟನೆ ನಡೆದ ದಿನ ಪೊಲೀಸ್ ಕಮಿಷನರ್ ಅವರು ರಜೆ ಇದ್ದ ಕಾರಣ ತಡವಾಗಿದ್ದು, ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದರು.

ಶಾಸಕ ಭವನಕ್ಕೆ ಮಾಧ್ಯಮಗಳ ಪ್ರವೇಶ ನಿರ್ಬಂಧ ವಿಚಾರವಾಗಿ ಮಾತನಾಡಿದ ಅವರು, ಮಅದು ಸ್ಪೀಕರ್ ವ್ಯಾಪ್ತಿಗೆ ಒಳಪಟ್ಟಿದೆ. ನಾನೇನೂ ಕಾಮೇಂಟ್ ಮಾಡುವುದಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next