Advertisement

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

11:49 PM Apr 26, 2024 | Team Udayavani |

ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ಮುಸ್ಲಿಂ ಮೀಸಲಾತಿ ವಿಚಾರದಲ್ಲಿ ಸುಳ್ಳು ಹೇಳುತ್ತಿದ್ದಾರೆ. ಅದರಲ್ಲೂ ಕೋರ್ಟ್‌ ವಿಷಯದಲ್ಲಿ ಸುಳ್ಳು ಹೇಳುವುದು ದೊಡ್ಡ ತಪ್ಪು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

Advertisement

ನಾವು ಕೋರ್ಟ್‌ನಲ್ಲಿ ಮುಸ್ಲಿಂ ಮೀಸಲಾತಿ ರದ್ದು ಮಾಡುತ್ತೇವೆ ಅಥವಾ ಮುಂದುವರಿಸುತ್ತೇವೆ ಎಂದು ಹೇಳಿಲ್ಲ. ನಾವು ಮಾಡಿದ ಆದೇಶವನ್ನು ಸಿದ್ದರಾಮಯ್ಯ ಶಿಷ್ಯ ರವಿಕುಮಾರ್‌ ವರ್ಮಾ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದರು. ಇದರ ಹಿಂದೆ ಸಿದ್ದರಾಮಯ್ಯ ಇದ್ದಾರೆ. ಕೋರ್ಟ್‌ ಪ್ರೊಸೀಡಿಂಗ್‌ ಮಾಡಲು ಸಮಯ ಕೇಳಿತ್ತು. ಅದಕ್ಕೆ ನಾವು ಒಪ್ಪಿಕೊಂಡಿದ್ದೆವು. ನಮ್ಮ ಪ್ರಕರಣದಲ್ಲಿ ನಾವು ವಾದ ಮಾಡುತ್ತೇವೆ ಎಂದು ಕೋರ್ಟ್‌ಗೆ ಹೇಳಿದ್ದೆವು ಹೊರತು ಪ್ರಕರಣವನ್ನು ಹಿಂಪಡೆದಿಲ್ಲ ಹಾಗೂ ಅಫಿದವಿತ್‌ ಕೂಡ ಸಲ್ಲಿಸಿಲ್ಲ. ನಮ್ಮ ನಿರ್ಧಾರಕ್ಕೆ ನಾವು ಬದ್ಧರಾಗಿದ್ದು, ನಮ್ಮ ನಿಲುವು ಕೂಡ ಸ್ಪಷ್ಟವಾಗಿದೆ. ಇಂದಿನ ಸರಕಾರ ಅದನ್ನು ಮುಂದುವರಿಸುತ್ತಾರೋ ಎಂಬುದನ್ನು ನೋಡಬೇಕು ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next