Advertisement

ಬೆಳಗಾವಿ ಅಧಿವೇಶನದಲ್ಲಿ ಉ.ಕರ್ನಾಟಕದ ನೀರಾವರಿ ಸಮಸ್ಯೆಗಳ ಚರ್ಚೆ: ಸಿಎಂ ಬೊಮ್ಮಾಯಿ

08:57 AM Dec 10, 2021 | Team Udayavani |

ಹುಬ್ಬಳ್ಳಿ: ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲ ಚಳಿಗಾಲ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಹಲವು ವಿಷಯಗಳು ಮತ್ತು ನೀರಾವರಿ ಬಗ್ಗೆ ಚರ್ಚೆಗಳು ಆಗುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Advertisement

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲವು ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚೆಗೆ ಒತ್ತು ನೀಡಲಾಗುವುದು ಎಂದರು.

ಮಹಾದಾಯಿ ಯೋಜನೆ ಅನುಷ್ಠಾನ ವಿಚಾರ ನ್ಯಾಯಾಲಯದಲ್ಲಿದೆ. ಕಾಮಗಾರಿ ಆರಂಭಿಸಲು ಏನು ಮಾಡಬೇಕು ಅದನ್ನು ಮಾಡುತ್ತೇವೆ ಎಂದರು.

ಒಮಿಕ್ರಾನ್ ಹಿನ್ನೆಲೆ ಕ್ರಿಸ್ ಮಸ್ ಹಾಗೂ ಹೊಸ ವರ್ಷಕ್ಕೆ ಯಾವುದೇ ನಿರ್ಬಂಧನೆ ಸದ್ಯಕ್ಕಿಲ್ಲ. ಆ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಬೆಳೆ ಹಾನಿ ಹಿನ್ನೆಲೆ ಪರಿಹಾರ ವಿತರಣೆ ಆರಂಭವಾಗಿದೆ. ಪರಿಹಾರ ಅನ್ನುವ ಆ್ಯಪ್ ಮೂಲಕ ಪ್ರತಿದಿನ ಪರಿಹಾರ ವಿತರಣೆ ಕಾರ್ಯ ನಡೆಯುತ್ತಿದೆ. ಪ್ರತಿಕೂಲ ಹವಾಮಾನ ಹಿನ್ನಲೆ ವಿಮಾನ ತಡವಾಯಿತು. ಇವತ್ತು ಪರಿಷತ್ ಚುನಾವಣೆ ಹಿನ್ನೆಲೆ ಮತ ಚಲಾಯಿಸಲು ಶಿಗ್ಗಾವಿಗೆ ತೆರಳುತ್ತಿದ್ದೇನೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next