Advertisement

ಆರ್ ಎಸ್ ಎಸ್, ಬಜರಂಗದಳ ನಿಷೇಧ ಪ್ರಶ್ನೆಯೇ ಇಲ್ಲ: ಗೃಹ ಸಚಿವ ಬೊಮ್ಮಾಯಿ ಹೇಳಿಕೆ

09:57 AM Jan 24, 2020 | keerthan |

ದಾವಣಗೆರೆ: ರಾಜ್ಯದಲ್ಲಿ ಆರ್ ಎಸ್ ಎಸ್ ಮತ್ತು ಬಜರಂಗದಳ ಸಂಘಟನೆಗಳನ್ನು ನಿಷೇಧ ಮಾಡುವ ಪ್ರಶ್ನೆಯೇ ಇಲ್ಲ ಎಂದು ರಾಜ್ಯದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Advertisement

ದಾವಣಗೆರೆಯಲ್ಲಿ ಮಾತನಾಡಿದ ಅವರು, ಈ ಸಂಘಗಳು ದೇಶಭಕ್ತ ಸಂಘಟನೆಗಳು. ನೆರೆ ಪರಿಹಾರ ಸೇರಿದಂತೆ ಹಲವು ಒಳ್ಳೆಯ ಕೆಲಸ ಮಾಡಿವೆ ಎಂದರು.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಏನು ಹೇಳುತ್ತಾರೊ ಅವರಿಗೆ ಗೊತ್ತಿರುವುದಿಲ್ಲ. ಹೆಚ್ ಡಿಕೆ ಹೇಳಿಕೆಗೆ ಪ್ರತಿಕ್ರಿಯಿಸುವುದಿಲ್ಲ ಎಂದರು.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿದ್ದ ಆರೋಪಿ ಆದಿತ್ಯ ರಾವ್ ವಿಚಾರಣೆ ವಿಚಾರವಾಗಿ ಮಾತನಾಡಿದ ಅವರು, ಆತ ಮಾನಸಿಕ ಅಸ್ವಸ್ಥ ಎಂದು ನಾನು ಹೇಳಿಲ್ಲ. ಈಗಾಗಲೇ ಮಂಗಳೂರು ಕಮಿಷನರ್ ಡಾ. ಹರ್ಷ  ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಅವರು ಎಲ್ಲಾ ವಿಚಾರಗಳನ್ನು ಹೇಳಿದ್ದಾರೆ. ಪೊಲೀಸರ ತನಿಖೆ ಮುಂದುವರಿದಿದೆ. ತನಿಖೆ ಪೂರ್ಣಗೊಂಡ ಬಳಿಕ ಸತ್ಯಾಂಶ ಹೊರ ಬರಲಿದೆ ಎಂದು ಹೇಳಿದರು.

ಮೌಢ್ಯ ನಿಷೇಧ ಕಾಯ್ದೆ ಜಾರಿ ವಿಚಾರವಾಗಿ ಮಾತನಾಡಿದ ಅವರು, ಈ ವಿಚಾರದಲ್ಲಿ ಗೊಂದಲ ಇತ್ತು. ಈಗ ಸರಿಯಾಗಿದೆ ಎಂದು ಬಸವರಾಜ್ ಬೊಮ್ಮಾಯಿ ಸ್ಪಷ್ಟನೆ ನೀಡಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next