Advertisement

ಬಲಪ್ರಯೋಗ ಇಲ್ಲದೇ ಲಾಕ್ ಡೌನ್ ಯಶಸ್ಸಿಗೆ ಜನರ ಸಹಕಾರ ಮುಖ್ಯ : ಬಸವರಾಜ ಬೊಮ್ಮಾಯಿ

12:56 PM May 11, 2021 | Team Udayavani |

ಬೆಂಗಳೂರು: ಬಲಪ್ರಯೋಗದ ಮಾಡದೆ ಲಾಕ್ ಡೌನ್ ಯಶಸ್ವಿಯಾಗಬೇಕಾದರೆ ಜನರ ಸಹಕಾರ ಮುಖ್ಯವಾಗಿರಬೇಕು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

Advertisement

ಮಂಗಳೂರು ಬೆಂಗಳೂರಿನ ಪಶು ಮಹಾವಿದ್ಯಾಲಯದಲ್ಲಿನ ಪೂರೈಕೆ ಕೇಂದ್ರಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಲಪ್ರಯೋಗ ಮಾಡದೇ ಲಾಕ್ ಡೌನ್ ಯಶಸ್ವಿಗೊಳಿಸಬೇಕಾದ ಅನಿವಾರ್ಯತೆ ಇದೆ.  ಅದಕ್ಕಾಗಿ ಲಾಠಿ ಪ್ರಹಾರ ಮಾಡದಂತೆ ಪೊಲೀಸರಿಗೆ ಈಗಾಗಲೇ ಸೂಚನೆ ನೀಡಲಾಗಿದೆ. 14 ದಿನಗಳ ಅವಧಿಯಲ್ಲಿ ನಿಯಮಗಳನ್ನು ಪಾಲಿಸಿದರೆ ಕೋವಿಡ್ ನಿಯಂತ್ರಣ ಸಾಧ್ಯ ಎಂದರು.

ಹೀಗಾಗಿ ಜನರ ಸಹಕಾರ ಅತಿ ಮುಖ್ಯವಾಗಿದೆ.  ಕಾನೂನು ಉಲ್ಲಂಘಿಸುವವರ ವಿರುದ್ಧ ಬಲಪ್ರಯೋಗ ಮಾಡಲಾರದೆ ವಾಹನ ಸೀಜ್ ಮಾಡುವುದು ಸೇರಿದಂತೆ ಇತರೆ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next