Advertisement

ಸತೀಶ್‌ ರೆಡ್ಡಿ ಕಾರುಗಳಿಗೆ ಬೆಂಕಿ ಹಚ್ಚಿದ ಪ್ರಕರಣ; ಶೀಘ್ರವೇ ಆರೋಪಿಗಳ ಬಂಧನ: ಸಿಎಂ

06:28 PM Aug 12, 2021 | Team Udayavani |

ಮಂಗಳೂರು: ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ ಶಾಸಕ ಸತೀಶ್‌ ರೆಡ್ಡಿ ಅವರ ಮನೆಯಲ್ಲಿ ನಿಲ್ಲಿಸಲಾಗಿದ್ದ ಎರಡು ಕಾರುಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಸುಟ್ಟು ಹಾಕಿದ ಘಟನೆಗೆ ಸಂಬಂಧಪಟ್ಟಂತೆ ಹಿರಿಯ ಉನ್ನತ ಪೊಲೀಸ್‌ ಅಧಿಕಾರಿಗಳ ಜೊತೆ ಮಾತನಾಡಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

Advertisement

ನಗರದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ರಾತ್ರಿಯೇ ಹಿರಿಯ ಪೊಲೀಸ್‌ ಅಧಿಕಾರಿಗಳು ಅವರ ಮನೆಗೆ ಭೇಟಿ ನೀಡಿದ್ದಾರೆ. ಈಗಾಗಲೇ ಕೃತ್ಯ ಎಸಗಿದವರ ವೀಡಿಯೊ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ಶೀಘ್ರದಲ್ಲಿಯೇ ಆರೋಪಿಗಳ ಬಂಧನವಾಗುತ್ತದೆ. ಈ ಕುರಿತಂತೆ ಕಠಿನ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ಇದನ್ನೂ ಓದಿ :ಕಾರಿಗೆ ಬೆಂಕಿ ಹಚ್ಚಿದವರ ಮೂಲವನ್ನು ಪೊಲೀಸರು ಬಯಲಿಗೆಳೆಯಲಿದ್ದಾರೆ : ಅಶ್ವತ್ಥನಾರಾಯಣ

Advertisement

Udayavani is now on Telegram. Click here to join our channel and stay updated with the latest news.

Next