Advertisement

ನಾನು ಶೆಟ್ಟರ್ ಸ್ನೇಹಿತರು…ಯಾವತ್ತೂ ಟಿಕೆಟ್ ತಪ್ಪಿಸುವ ಕೆಲಸ ಮಾಡಿಲ್ಲ : ಬೊಮ್ಮಾಯಿ

11:32 PM Apr 15, 2023 | Team Udayavani |

ಹುಬ್ಬಳ್ಳಿ: ರಾಜಕಾರಣಕ್ಕೆ ಬರುವುದಕ್ಕಿಂತ ಮುಂಚೆಯೇ ಶೆಟ್ಟರ್‌ ಹಾಗೂ ನಾನು ಸ್ನೇಹಿತರು. ಅವರಿಗೆ ಟಿಕೆಟ್‌ ತಪ್ಪಿಸುವ ಕೆಲಸ ಮಾಡುತ್ತಿಲ್ಲ. ಅವರ ಬೆಂಬಲಿಗರ ಮಾತಿನಲ್ಲಿ ಹುರುಳಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಗದೀಶ ಶೆಟ್ಟರ್‌ ಅವರಿಗೆ ಟಿಕೆಟ್‌ ಕೊಡಿಸುವಲ್ಲಿ ಸರ್ವ ಪ್ರಯತ್ನ ಮಾಡುತ್ತಿದ್ದೇವೆ. ಈ ವಿಚಾರದಲ್ಲಿ ನಿತ್ಯವೂ ವರಿಷ್ಠರೊಂದಿಗೆ ಸಂಪರ್ಕದಲ್ಲಿದ್ದೇವೆ. ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ವರಿಷ್ಠರಾದ ಧರ್ಮೇಂದ್ರ ಪ್ರದಾನ ಜತೆ ನಿರಂತರ ಸಂಪಕದಲ್ಲಿದ್ದೇವೆ. ಆದರೆ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎನ್ನುವುದರಲ್ಲಿ ಸತ್ಯಾಂಶವಿಲ್ಲ. ಜಗದೀಶ ಶೆಟ್ಟರ್‌ ಹಾಗೂ ಅವರ ಕುಟುಂಬ ಬಿಜೆಪಿಯ ನಿಷ್ಠರಾಗಿದ್ದು, ಅವರದ್ದು ಜನಸಂಘ ಕಾಲದ ಮನೆತನವಾಗಿದೆ. ಉತ್ತರ ಕರ್ನಾಟಕ ಭಾಗಕ್ಕೆ ಅವರು ಅಗತ್ಯವಾಗಿದೆ. ಅವರನ್ನು ಸಕ್ರಿಯ ರಾಜಕಾರಣದಲ್ಲಿ ಉಳಿಸಿಕೊಳ್ಳಬೇಕೆಂದು ವರಿಷ್ಠರೊಂದಿಗೆ ಮಾತನಾಡುತ್ತಿದ್ದೇವೆ. ಮನವೊಲಿಸಲು ಪ್ರಯತ್ನ ಮಾಡುತ್ತಿದ್ದೇವೆ. ಅವರು ಪಕ್ಷದಲ್ಲಿ ಉಳಿಯುತ್ತಾರೆ ಎನ್ನುವ ವಿಶ್ವಾಸವಿದೆ ಎಂದರು.

ನಾನು ನೀರಾವರಿ ಯೋಜನೆಯಲ್ಲಿ ಭ್ರಷ್ಟಾಚಾರ ಮಾಡಿದ್ದರೆ ದಾಖಲೆಗಳನ್ನು ನೆಹರು ಓಲೇಕಾರ ಬಿಡುಗಡೆ ಮಾಡಲಿ. ಈ ಹಿಂದೆಯೇ ಅವರು ಮಾಡಿರುವ ಆರೋಪಗಳಿಗೆ ಸಂಬಂಧಿಸಿದ ದಾಖಲೆ ಬಹಿರಂಗಪಡಿಸುವಂತೆ ಹೇಳಿದ್ದೇನೆ. ನೀರಾವರಿ ಯೋಜನೆಯಲ್ಲಿ ನಡೆದ ಹಗರಣದಲ್ಲಿ ಓಲೇಕಾರ ಶಿಕ್ಷೆ ಗುರಿಯಾಗಿದ್ದಾರೆ. ಅದನ್ನು ನೆನಪಿಸಿಕೊಳ್ಳಲಿ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next