Advertisement

ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಚುನಾವಣೆ, ಅವರೇ ಮುಂದಿನ ಸಿಎಂ: ಸಚಿವ ಸೋಮಣ್ಣ

02:21 PM Oct 31, 2021 | Team Udayavani |

ದಾವಣಗೆರೆ: ಬಸವರಾಜ ಬೊಮ್ಮಾಯಿ ಅವರೇ ಮುಂದಿನ ಮುಖ್ಯಮಂತ್ರಿ. ಮುಂದಿನ ಚುನಾವಣೆ ಬೊಮ್ಮಾಯಿ ಅವರ ನೇತೃತ್ವದಲ್ಲಿ ಮಾಡ್ತೀವಿ ಅಂದರೆ ಮುಂದಿನ ಮುಖ್ಯಮಂತ್ರಿ ಅವರೇ ಎಂದರ್ಥ ಎಂದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದರು.

Advertisement

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ಕಂದಾಯ ಸಚಿವ ಆರ್. ಅಶೋಕ್ ಅವರು ಹೇಳುವುದು ಅದೇ ಅರ್ಥ. ನಾನು ಹೇಳುವುದು ಅದೇ ಅರ್ಥ ಎಂದು ಹೇಳಿದರು.

ಬೆಂಗಳೂರು ಜಿಲ್ಲಾ ಉಸ್ತುವಾರಿ ಸ್ಥಾನಕ್ಕೆ ಸಚಿವ ಆರ್. ಅಶೋಕ್ ಹಾಗೂ ನನ್ನ ನಡುವೆ ಯಾವುದೇ ಫೈಟ್ ಇಲ್ಲ. ಯಾರನ್ನು ನೇಮಿಸಬೇಕೆಂಬುದು ಸಿಎಂ ಪರಮಾಧಿಕಾರ. ಉಸ್ತುವಾರಿ ಸಚಿವ ಸ್ಥಾನ ಯಾರಿಗೆ ಕೊಟ್ಟರೇನು ಬಿಡಪ್ಪ. ಅದು ಮುಗಿದ ಅಧ್ಯಾಯ. ನಾನು ಒಂದೇ ಸಾರಿ ಹೇಳುವುದು, ಎರಡನೇ ಸಾರಿ ಹೇಳಿದರೆ ಮಜಾ ಸಿಗುವುದಿಲ್ಲ.‌ ಹಾಗಾಗಿ ಒಂದು ಬಾರಿ ಹೇಳಿದ್ದೀನಿ ಎಂದು ಹಾಸ್ಯ ಚಟಾಕಿ ಹಾರಿಸಿದರು.

ಇದನ್ನೂ ಓದಿ:ಇಂದಿರಾ ಗಾಂಧಿ ಜನರ ಮನಸ್ಸಿನಲ್ಲಿ ದೇವರಾಗಿದ್ದರು: ಸಿದ್ದರಾಮಯ್ಯ

ಮತ್ತೆ 2023ಕ್ಕೆ ನಾವು ಅಧಿಕಾರ ಹಿಡಿಯಬೇಕು. ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿದ್ದೇವೆ ಎಂದರು. ಹಾನಗಲ್ ಹಾಗೂ ಸಿಂಧಗಿ ಉಪಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದೆ. ಹಾನಗಲ್ ನಲ್ಲಿ ಶೇ. 83 ಹಾಗೂ ಸಿಂಧಗಿಯಲ್ಲಿ ಶೇಕಡಾ 69ರಷ್ಟು ಮತದಾನವಾಗಿದೆ. ಸಿಂಧಗಿಯಲ್ಲಿ 18ರಿಂದ 20 ಸಾವಿರ ಅಂತರದಿಂದ ಗೆಲ್ಲುತ್ತೇವೆ. ಹಾನಗಲ್ ಕೂಡ ನಾವೇ ಜಯಭೇರಿ ಬಾರಿಸುತ್ತೇವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

Advertisement

ರಾಜ್ಯ ಸರ್ಕಾರ ಶೋಕಾಚರಣೆ ಜೊತೆಯಲ್ಲಿ ರಾಜಕುಮಾರ ಇತಿಹಾಸ ಬಲ್ಲವರಾಗಿ ಅವರ ಕುಟುಂಬದ ಜೊತೆ ಇಡೀ ದೇಶವೇ ಕಂಬನಿ ಮಿಡಿದಿದೆ. ಪುನೀತ್ ರಾಜಕುಮಾರ್ ಅವರ ಅಂತ್ಯಕ್ರಿಯೆ ಸರ್ಕಾರಿ ಗೌರವಗಳೊಂದಿಗೆ ನೆರವೇರಿದೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next