Advertisement

ಕೋವಿಡ್ ನಿಯಂತ್ರಣಕ್ಕೆ ಕಟ್ಟು ನಿಟ್ಟಿನ ಕ್ರಮ : ಸಚಿವ ಬಸವರಾಜ ಬೊಮ್ಮಾಯಿ

08:43 PM Apr 21, 2021 | Team Udayavani |

ಬೆಂಗಳೂರು: ಕೋವಿಡ್ ನಿಯಂತ್ರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿ ಮತ್ತು ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Advertisement

ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಬುಧವಾರ ಬೆಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ನಡೆಸಿದ ಮಹತ್ವದ ಸಭೆಯಲ್ಲಿ  ಅವರು ಈ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸೋಂಕು ಹರಡುವಿಕೆ ತಡೆಗಟ್ಟಲು ಪೊಲೀಸ್ ಇಲಾಖೆಯಿಂದ ತೆಗೆದುಕೊಳ್ಳುವ ಕ್ರಮಗಳನ್ನು ಪರಾಮರ್ಶಿಸಲು ಮತ್ತು ಮಾರ್ಗಸೂಚಿಗಳನ್ನು ಪಾಲನೆ ಮಾಡುವ ನಿಟ್ಟಿನಲ್ಲಿ ಎಡಿಜಿಪಿ ಮಟ್ಟದ ಅಧಿಕಾರಿಗಳನ್ನು ವಲಯವಾರು ನಿಯೋಜಿಸಲಾಗಿದೆ. ಸರ್ಕಾರ ಜಾರಿಗೊಳಿಸಿರುವ ಕಠಿಣ ಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಅಧಿಕಾರಿಗಳು ನಿಗಾ ವಹಿಸಲಿದ್ದಾರೆ.  ವಿವಿಧ ಇಲಾಖೆಗಳ ನಡುವೆ ಸಮನ್ವಯ ಸಾಧಿಸಿ ಕೋವಿಡ್ ನಿಯಂತ್ರಿಸಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ .

ಕೋವಿಡ್ ನಿಯಂತ್ರಣದ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ಮತ್ತು  ಅಧಿಕಾರಿಗಳು ಸುರಕ್ಷತೆಗೂ ಹೆಚ್ಚು ಆದ್ಯತೆ ನೀಡಬೇಕು. ಎಸ್ ಡಿ ಆರ್ ಎಫ್ ಅಡಿ 10 ಕೋಟಿ ರೂಪಾಯಿ ನೆರವು ಕೋರಲಾಗಿದೆ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next