Advertisement

ಬಸವರಾಜ್ ಹೊರಟ್ಟಿ ಮತ್ತೆ ಸಭಾಪತಿ? ವಿಧಾನ ಪರಿಷತ್ ಸದಸ್ಯರ ಜೊತೆ ಸಿಎಂ ಸಭೆ 

12:39 PM Sep 13, 2022 | Team Udayavani |

ಬೆಂಗಳೂರು : ಸಭಾಪತಿ ಆಯ್ಕೆ ಮಾಡುವ ಕುರಿತು ಬಿಜೆಪಿ ವಿಧಾನ ಪರಿಷತ್ ಸದಸ್ಯರ ಜೊತೆ ಸಿಎಂ ಬಸವರಾಜ ಬೊಮ್ಮಾಯಿ ಸಭೆ ನಡೆಸಿದ್ದು, ಹಿರಿಯ ಸದಸ್ಯ ಬಸವರಾಜ್ ಹೊರಟ್ಟಿ ಅವರನ್ನು ಮತ್ತೆ ಸಭಾಪತಿ ಮಾಡುವ ಕುರಿತು ಚರ್ಚೆ ನಡೆಸಲಾಗಿದೆ.

Advertisement

ವಿಧಾನ ಪರಿಷತ್ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಸೇರುವ ಸಂದರ್ಭದಲ್ಲಿ ಮತ್ತೆ ಸಭಾಪತಿ ಮಾಡುವ ಷರತ್ತಿನೊಂದಿಗೆ ಬಸವರಾಜ ಹೊರಟ್ಟಿ ಬಿಜೆಪಿ ಸೇರಿದ್ದರು ಎಂಬ ಮಾತುಗಳು ಕೇಳಿ ಬಂದಿದ್ದವು. ಈ ಕಾರಣಕ್ಕಾಗಿ ಮತ್ತೆ ಅವರನ್ನು ಸಭಾಪತಿ ಮಾಡುವ ಕುರಿತು ಚರ್ಚೆ ನಡೆಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಇದೇ ವಾರದಲ್ಲಿ ಸಭಾಪತಿ ಚುನಾವಣೆ ನಡೆಸಲು ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ತಿಳಿದು ಬಂದಿದೆ.

ಸಭಾಪತಿ ಆಯ್ಕೆ ಮಾಡುವ ಕುರಿತು ಮುಖ್ಯಮಂತ್ರಿ ಬಸರಾಜ ಬೊಮ್ಮಾಯಿ ಪಕ್ಷದ ಪರಿಷತ್ ಸದಸ್ಯರಿಂದ ಪ್ರತ್ಯೇಕ ಅಭಿಪ್ರಾಯ ಸಂಗ್ರಹಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇದೇ ವೇಳೆ, ಉಪ ಸಭಾಪತಿ ಆಯ್ಕೆ ಕುರಿತಂತೆಯೂ ಚರ್ಚೆ ನಡೆಸಲಾಗಿದೆ ಎನ್ನಲಾಗಿದ್ದು, ಬಹುತೇಕ ಎಂ.ಕೆ. ಪ್ರಾಣೇಶ್ ಅವರೇ ಉಪ ಸಭಾಪತಿಯಾಗುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.

ಅಲ್ಲದೆ ಸದನದಲ್ಲಿ ಕಾಂಗ್ರೆಸ್ ಮಾಡುವ ಆರೋಪಗಳಿಗೆ ಕೌಂಟರ್ ಕೊಡುವ ಬಗ್ಗೆಯೂ ಸಭೆಯಲ್ಲಿ ಸದಸ್ಯರಿಗೆ ಸೂಚಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ : 15 ದಿನಗಳ ಒಳಗೆ ಸುರತ್ಕಲ್‌ ಟೋಲ್‌ ತೆರವು : ಟ್ರಕ್‌ ಮಾಲಕರ ಸಂಘಕ್ಕೆ ಗಡ್ಕರಿ ಭರವಸೆ

Advertisement
Advertisement

Udayavani is now on Telegram. Click here to join our channel and stay updated with the latest news.

Next