Advertisement

ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಆಯ್ಕೆ?

12:33 AM Feb 09, 2021 | Team Udayavani |

ಬೆಂಗಳೂರು : ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಜೆಡಿಎಸ್‌ನ ಬಸವರಾಜ ಹೊರಟ್ಟಿ ಮತ್ತು ಕಾಂಗ್ರೆಸ್‌ ಅಭ್ಯರ್ಥಿಯಾಗಿ ನಸೀರ್‌ ಅಹಮದ್‌ ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ. ಮಂಗಳವಾರ ಚುನಾವಣೆ ನಡೆಯಲಿದೆ.

Advertisement

ಸಂಖ್ಯಾಬಲದ ಪ್ರಕಾರ ಬಸವರಾಜ ಹೊರಟ್ಟಿ ಗೆಲುವು ಖಚಿತ. ಆದರೆ “ಮುಸ್ಲಿಂ ಅಭ್ಯರ್ಥಿ ಕಣದಲ್ಲಿದ್ದರೂ ಜೆಡಿಎಸ್‌ ಬಿಜೆಪಿಗೆ ಬೆಂಬಲ ನೀಡಿತು’ ಎಂಬ ಅಸ್ತ್ರ ಬಳಸಿಕೊಳ್ಳಲು ಕಾಂಗ್ರೆಸ್‌ ಅಹಮದ್‌ ಅವರನ್ನು ಕಣಕ್ಕೆ ಇಳಿಸಿದೆ.

ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಎಂ.ಟಿ.ಬಿ. ನಾಗರಾಜ್‌ ಜತೆಗೂಡಿ ಬಸವರಾಜ ಹೊರಟ್ಟಿ ಚುನಾವಣ ಅಧಿಕಾರಿಯೂ ಆಗಿರುವ ಪರಿಷತ್‌ ಕಾರ್ಯದರ್ಶಿ ಮಹಾಲಕ್ಷ್ಮೀ ಅವರಿಗೆ ನಾಮಪತ್ರ ಸಲ್ಲಿಸಿದ್ದಾರೆ. ಅನಂತರ ಕಾಂಗ್ರೆಸ್‌ ಅಭ್ಯರ್ಥಿಯಾಗಿ ನಸೀರ್‌ ಅಹಮದ್‌ ನಾಮಪತ್ರ ಸಲ್ಲಿಸಿದರು.

ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್‌, ಮಾಜಿ ಸಚಿವ ಜಮೀರ್‌ ಅಹಮದ್‌, ವಿಪಕ್ಷದ ಸಚೇತಕ ನಾರಾಯಣಸ್ವಾಮಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next