Advertisement

ಆರ್ಥಿಕ ಸ್ವಾಯತ್ತತೆಗೆ ಬಜೆಟ್‌ನಲ್ಲಿ ಹಣ ಮೀಸಲಿಗೆ ಹೊರಟ್ಟಿ ಮನವಿ

08:08 PM Nov 18, 2021 | Team Udayavani |

ಶಿಮ್ಲಾ: ವಿಧಾನ ಮಂಡಲಗಳ ಸ್ವತಂತ್ರ ನಿರ್ವಹಣೆ ಹಾಗೂ ಪûಾತೀತ ಕಾರ್ಯನಿರ್ವಹಣೆ ದೃಷ್ಟಿಯಿಂದ ಆರ್ಥಿಕ ಸ್ವಾಯತ್ತತೆ ನೀಡುವುದು ಅಗತ್ಯವಾಗಿದ್ದು, ಬಜೆಟ್‌ನಲ್ಲಿ ಪ್ರತ್ಯೇಕ ಹಣ ಮೀಸಲಿಡಬೇಕೆಂದು ಕರ್ನಾಟಕ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಮನವಿ ಮಾಡಿದರು.

Advertisement

ಶಿಮ್ಲಾದಲ್ಲಿ ನಡೆದ ಎರಡು ದಿನಗಳ 82ನೇ ಅಖೀಲ ಭಾರತ ಪೀಠಾಸೀನಾಧಿಕಾರಿಗಳ ಸಮ್ಮೇಳನ ಮತ್ತು ಶತಮಾನೋತ್ಸವ ಸಮಾರಂಭದಲ್ಲಿ ಸಮ್ಮೇಳನದ ನಿರ್ಣಯ ಕುರಿತ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿ, ವಿಧಾನ ಮಂಡಲದ ಸಚಿವಾಲಯಕ್ಕೆ ಆರ್ಥಿಕ ಸ್ವಾಯತ್ತತೆ ನೀಡುವ ಕುರಿತು ಸಮ್ಮೇಳನ ಪೂರಕ ನಿರ್ಣಯ ಸ್ವೀಕರಿಸಿ, ಸದನಗಳ ಗೌರವ, ಘನತೆ ಹಾಗೂ ಪ್ರಾಮುಖ್ಯತೆ ಹೆಚ್ಚಿಸಬೇಕು. ಈ ನಿಟ್ಟಿನಲ್ಲಿ ಲೋಕಸಭಾಧ್ಯಕ್ಷರು ನಿರ್ಣಯ ಅಂಗೀಕರಿಸುವ ಮೂಲಕ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.

ಇದಕ್ಕೆ ಪೂರಕವಾಗಿ ಸ್ಪಂದಿಸಿದ ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ, ಕೂಡಲೇ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಮನವಿ ಮಾಡುವುದಾಗಿ ಭರವಸೆ ನೀಡಿದರು.

ಇ- ವಿಧಾನ್‌ ತಂತ್ರಜ್ಞಾನ ಅಳವಡಿಕೆಗೆ ಮನವಿ:
ವಿಧಾನ ಮಂಡಲದ ದೈನಂದಿನ ಕಾರ್ಯಚಟುವಟಿಕೆ ಹಾಗೂ ಆಡಳಿತವನ್ನು ಕಾಗದ ರಹಿತವನ್ನಾಗಿಸಲು ಇ-ವಿಧಾನ್‌ ತಂತ್ರಜ್ಞಾನವನ್ನು ಕೂಡ ಅಳವಡಿಸಿಕೊಳ್ಳುವುದು ಪ್ರಸ್ತುತ ಎಂದು ಹೇಳಿದರು. ಇದಕ್ಕೆ ಸ್ಪಂದಿಸಿದ ಸಭೆ, ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ ತೀರ್ಮಾನಿಸಿತು.

ವಿಧಾನ ಮಂಡಲಗಳ ಸ್ವತಂತ್ರ ನಿರ್ವಹಣೆ ಹಾಗೂ ಪಕ್ಷಾತೀತ ಕಾರ್ಯನಿರ್ವಹಣೆ ದೃಷ್ಟಿಯಿಂದ ಆರ್ಥಿಕ ಸ್ವಾಯತ್ತತೆ ನೀಡುವುದು ಮತ್ತು ಎರಡು ದಿನಗಳ ಸಮ್ಮೇಳನದ ಎಲ್ಲಾ ನಿರ್ಣಯಗಳನ್ನು ಯಥಾವತ್ತಾಗಿ ಅನುಷ್ಠಾನಗೊಳಿಸಲು ಮನವಿ ಮಾಡಿದರು.

Advertisement

ಸಭಾಪತಿಗಳ ಮನವಿಗೆ ಸಹಮತ ವ್ಯಕ್ತಪಡಿಸಿದ ಓಂ ಬಿರ್ಲಾ, ದೇಶದ ಎಲ್ಲಾ ವಿಧಾನ ಮಂಡಲಗಳಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಸಿ, ಪಾರದರ್ಶಕ ಹಾಗೂ ಸುಗಮ ಕಲಾಪಕ್ಕೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ರಾಜ್ಯಸಭೆಯ ಉಪಸಭಾಪತಿ ಹರಿವಂಶ್‌ ನಾರಾಯಣ ಸಿಂಗ್‌ ಮಾತನಾಡಿ, ಮೊದಲ ಪೀಠಾಸೀನಾಧಿಕಾರಿಗಳ ಸಮ್ಮೇಳನ 1921ರಲ್ಲಿ ಮತ್ತು ಶತಮಾನತದ ಸಮ್ಮೇಳನ ಎರಡೂ ಕೂಡ ಹಿಮಾಚಲ ಪ್ರದೇಶದಲ್ಲಿಯೇ ನಡೆಯುತ್ತಿರುವುದು ಸಂತಸದ ಸಂಗತಿ ಎಂದರು.

ಇದನ್ನೂ ಓದಿ : ಭಾರಿ ಮಳೆ ಸಾಧ್ಯತೆ :ರಾಜ್ಯದ ಕೆಲ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ

ಹಿಮಾಚಲ ಪ್ರದೇಶದ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್‌ ಅರ್ಲೆಕರ್, ಎರಡು ದಿನಗಳ ಸಮ್ಮೇಳನ ಫ‌ಲಪ್ರದವಾಗಿದೆ. ಪ್ರಜಾಪ್ರಭುತ್ವದ ಯಶಸ್ಸಿಗೆ ಸಮ್ಮೇಳನದಲ್ಲಿ ಕೈಗೊಂಡ ನಿರ್ಣಯಗಳನ್ನು ಜಾರಿಗೊಳಿಸಿ ಪ್ರಜಾಸತ್ತಾತ್ಮಕ ಮೌಲ್ಯಗಳ ಬಲವರ್ಧನೆಗೆ ಎಲ್ಲರೂ ಕೈಜೋಡಿಸಬೇಕೆಂದು ಮನವಿ ಮಾಡಿದರು.

ಕರ್ನಾಟಕ ವಿಧಾನಸಭಾ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ, ಹಿಮಾಚಲ ಪ್ರದೇಶದ ವಿಧಾನಸಭಾ ಸ್ಪೀಕರ್‌ ವಿಪಿನ್‌ ಸಿಂಗ್‌ ಪರಮಾರ್‌ ಸೇರಿದಂತೆ ವಿವಿಧ ರಾಜ್ಯಗಳ ವಿಧಾನ ಸಭಾಧ್ಯಕ್ಷರು ಹಾಗೂ ಸಭಾಪತಿಗಳು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next