Advertisement

ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಆಯ್ಕೆಯಾಗಲಿ: ಕೋನರೆಡ್ಡಿ

05:09 PM Dec 19, 2020 | keerthan |

ಹುಬ್ಬಳ್ಳಿ: ವಿಧಾನ ಪರಿಷತ್ ನ ಸಭಾಪತಿ ಸ್ಥಾನಕ್ಕೆ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಅವರು ಪಕ್ಷಾತೀತವಾಗಿ ಆಯ್ಕೆ ಆಗಬೇಕಾಗಿದೆ ಎಂದು ಮಾಜಿ ಶಾಸಕ ಎನ್.ಎಚ್.ಕೋನರಡ್ಡಿ ಅಭಿಪ್ರಾಯ ಪಟ್ಟಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಷತ್ತಿನ ಹಿರಿಯ ಸದಸ್ಯ ಹೊರಟ್ಟಿ ಅವರಿಗೆ ಸಭಾಪತಿ ಸ್ಥಾನ ನೀಡುವ ಕುರಿತು ಬಿಜೆಪಿಯವರಿಗೆ ಮನವಿ ಮಾಡಿದ್ದೇವೆ. ಹೊರಟ್ಟಿ ಅವರು ಸಭಾಪತಿ ಆಗುವುದನ್ನು ಎಲ್ಲ ಪಕ್ಷಗಳವರು ಒಪ್ಪಲಿದ್ದಾರೆ ಎಂಬ ವಿಶ್ವಾಸ ನನ್ನದು.

ಸಭಾಪತಿ ಸ್ಥಾನ ಕುರಿತಾಗಿ ಜೆಡಿಎಸ್ ನಿಂದ ಹೊರಟ್ಟಿ ಅವರನ್ನು ಅಂತಿಮಗೊಳಿಸಲಾಗಿದೆ. ಪಕ್ಷದ ವರಿಷ್ಠ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು   ಹೊರಟ್ಟಿ ಅವರನ್ನು ಸಭಾಪತಿಯಾಗಿಸಲು ಸಹಮತ ವ್ಯಕ್ತಪಡಿಸಿದ್ದಾರೆ ಎಂದರು.

ವಿಧಾನ ಪರಿಷತ್ ನಲ್ಲಿ ಗದ್ದಲ ಕುರಿತಾಗಿ ರಾಜ್ಯದ ಜನತೆಗೆ ಕ್ಷಮೆ ಕೋರುವ ಮೂಲಕ ಸಂಸದೀಯ ಕಳಕಳಿಯನ್ನು ತೋರಿದ್ದಾರೆ. ಇಂತಹ ಮುತ್ಸದ್ದಿ ರಾಜಕಾರಣಿ ಸಭಾಪತಿ ಆಗುವುದು ಸೂಕ್ತವಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next