Advertisement

ಬಸವರಾಜ ಹೊರಟ್ಟಿ ಬಿಜೆಪಿ ಸೇರ್ಪಡೆಗೆ ನಡೆಯುತ್ತಿದೆ ಲೆಕ್ಕಾಚಾರ

09:15 AM Jan 19, 2022 | Team Udayavani |

ಬೆಂಗಳೂರು: ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿಅವರ ಮುಂದಿನ ರಾಜಕೀಯ ನಡೆಯ ಬಗ್ಗೆ ಸಾಕಷ್ಟು ಕುತೂಹಲ ಉಂಟಾಗಿದ್ದು, ಬಿಜೆಪಿ ಸೇರ್ಪಡೆಯ ಕುರಿತು ಮಾತುಕತೆ ನಡೆದಿದೆಯಾದರೂ ಹೊರಟ್ಟಿಯವರ ಷರತ್ತುಗಳ ಕುರಿತು ಬಿಜೆಪಿ ಮೌನ ವಹಿಸಿದೆೆ.

Advertisement

ಬಿಜೆಪಿ ಬೆಂಬಲದೊಂದಿಗೆ ಸಭಾಪತಿಯಾಗಿರುವ ಬಸವರಾಜ್‌ ಹೊರಟ್ಟಿ ಯವರ ಸದಸ್ಯತ್ವ ಈ ವರ್ಷದ ಜು.4ಕ್ಕೆ ಮುಕ್ತಾಯವಾಗಲಿದ್ದು, ಈ ಬಾರಿ ಯಾವ ಪಕ್ಷದಿಂದ ಸ್ಪರ್ಧೆ ಮಾಡಲಿದ್ದಾರೆ ಎಂಬ ವಿಚಾರದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ.

ಸಭಾಪತಿಯಾದ ಅನಂತರ ಜೆಡಿಎಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಈ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಬೇಕಾ? ಬೇರೆ ಪಕ್ಷಕ್ಕೆ ಹೋಗಬೇಕಾ ಅಥವಾ ಪಕ್ಷೇತರರಾಗಿ ಸ್ಪರ್ಧಿಸಬೇಕಾ ಎನ್ನುವ ಕುರಿತು ಹೊರಟ್ಟಿ ಇನ್ನೂ ಗೊಂದಲದಲ್ಲಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ:ಎಲ್ಲ ಶಾಲಾ ಕಾಲೇಜುಗಳಲ್ಲಿ ಸುಭಾಷಚಂದ್ರ ಭೋಸ್‌ರ 125 ನೇ ಜಯಂತಿ ಆಚರಣೆ: ಸಿಎಂ

ಬಿಜೆಪಿಗೆ ಆಹ್ವಾನ
ಇದರ ನಡುವೆಯೇ ಬಿಜೆಪಿ ನಾಯಕರು ತಮ್ಮ ಪಕ್ಷಕ್ಕೆ ಬರುವಂತೆ ಹೊರಟ್ಟಿಯವರಿಗೆ ಆಹ್ವಾನ ನೀಡಿದ್ದಾರೆ ಎನ್ನಲಾಗಿದ್ದು, ಪಕ್ಷದ ಮುಖಂಡರು ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.

Advertisement

ಹೊರಟ್ಟಿ ಅವರ ಷರತ್ತುಗಳು: ಬಿಜೆಪಿಗೆ ಸೇರಿದರೆ ಸಭಾಪತಿ ಸ್ಥಾನದಲ್ಲಿಯೇ ತಮ್ಮನ್ನು ಮುಂದುವರಿಸಬೇಕು. 2023ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಸಚಿವ ಸ್ಥಾನ ನೀಡಬೇಕು ಎಂಬ ಎರಡು ಷರತ್ತು ವಿಧಿಸಿದ್ದಾರೆ ಎನ್ನಲಾಗಿದ್ದು ಬಿಜೆಪಿ ಯಾವುದೇ ತೀರ್ಮಾನಕ್ಕೆ ಬಂದಿಲ್ಲ .

Advertisement

Udayavani is now on Telegram. Click here to join our channel and stay updated with the latest news.

Next