Advertisement

ಬಸವರಾಜ ಹೊರಟ್ಟಿ ರಾಜೀನಾಮೆ ಅಂಗೀಕಾರ

06:40 AM Feb 11, 2018 | Team Udayavani |

ಬೆಂಗಳೂರು : ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟದಲ್ಲಿ ನಾಯಕತ್ವ ವಹಿಸಿಕೊಂಡು ಅಖೀಲ ಭಾರತ ವೀರಶೈವ ಮಹಾಸಭೆಯ ಮಹಾದಾನಿ ಸದಸ್ಯತ್ವಕ್ಕೆ ಹಿರಿಯ ವಿಧಾನಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ನೀಡಿದ್ದ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ.

Advertisement

ಅ.ಭಾ.ವೀರಶ್ವವ ಮಹಾಸಭೆ ಅಧ್ಯಕ್ಷ ಶಾಮನೂರು ಶಿವಶಂಕರಪ್ಪನವರು ಹೊರಟ್ಟಿಯವರ ರಾಜೀನಾಮೆ ಅಂಗೀಕರಿಸಿದ್ದಾರೆ. ಈ ಸಂಬಂಧ ಹೊರಡಿಸಲಾದ ಪತ್ರದಲ್ಲಿ  ಅವರು ಸ್ವ ಇಚ್ಛೆಯಿಂದ ರಾಜೀನಾಮೆ ನೀಡಿರುವುದನ್ನು ಅಂಗೀಕರಿಸಲಾಗಿದೆ ಎಂದು ತಿಳಿಸಲು ತಮಗೆ ವಿಷಾಧವಾಗುತ್ತದೆ ಎಂದು ತಿಳಿಸಿದ್ದಾರೆ. ಜತೆಗೆ “ನಿಮ್ಮ ಮುಂದಿನ ಕೆಲಸ ಕಾರ್ಯಗಳಿಗೆ ಬಸವಾದಿಶರಣರು ತಮ್ಮ ಕೈ ಹಿಡಿದು ನಡೆಸಲಿ ಎಂದು ಮಹಾಸಭೆಯು ಪ್ರಾರ್ಥಿಸುತ್ತದೆ ‘ ಎಂದು ತಿಳಿಸುವ ಮೂಲಕ ಹೊರಟ್ಟಿಯವರು ನಡೆಸುತ್ತಿರುವ ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟವನ್ನು ಪರೋಕ್ಷವಾಗಿ ಟೀಕಿಸಿದ್ದಾರೆ.

ಲಿಂಗಾಯತ ಪ್ರತ್ಯೇಕ ಧರ್ಮ ಮಾನ್ಯತೆ ಹೋರಾಟವನ್ನು ತೀವ್ರಗೊಳಿಸಲು ವೀರಶೈವ ಮಹಾಸಭೆಗೆ ಪರ್ಯಾಯವಾಗಿ ಲಿಂಗಾಯತ ಮಹಾಸಭೆ ಸ್ಥಾಪಿಸುವ ನಿರ್ಣಯ ಕೈಗೊಂಡು ಬಸವರಾಜ ಹೊರಟ್ಟಿ ಹಾಗು ಲಿಂಗಾಯತ ಧರ್ಮ ಚಳುವಳಿಗಾರರು ವೀರಶೈವ ಮಹಾಸಭೆಯ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next