Advertisement

Gadag; ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

03:44 PM Mar 27, 2024 | Team Udayavani |

ಗದಗ: ಬಸವರಾಜ ಬೊಮ್ಮಾಯಿ ದಾವಣಗೆರೆ ಚಾರ್ಲಿ ಇದ್ದಂತೆ. ಆದರೆ ಇದೀಗ ಮುದುಕರಾಗಿದ್ದಾರೆ. ಆದರೆ ಹೊಸ ಕುಸ್ತಿ ಪಟು ಬಿಟ್ಟಾಗ ಯಾರು ಗೆಲ್ಲುತ್ತಾರೆಂದು ಗೊತ್ತಾಗುತ್ತದೆ. ದಾವಣಗೆರೆ ಚಾರ್ಲಿ ಜೊತೆಗೆ ಹೊಸ ಜಾಣ ಕುಸ್ತಿಪಟು ಇಂದು ಕಣದಲ್ಲಿ ಇದ್ದಾನೆ. ಹೀಗಾಗಿ ಆನಂದ ಗಡ್ಡದ್ದೇವರಮಠ ಗೆಲುವು ನಿಶ್ಚಿತ ಎಂದು ಗದಗದಲ್ಲಿ ಸಚಿವ ಎಚ್.ಕೆ.ಪಾಟೀಲ ವ್ಯಂಗ್ಯವಾಡಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿಗಳ ಹಿಂದೆ ದೊಡ್ಡದೊಂದು ಲಗೇಜ್ ಇದೆ. ದೊಡ್ಡ‌ ಭಾರವಿದೆ. ಅವರು ಜನರಿಗೆ ಏನು ಹೇಳುತ್ತಾರೋ ಗೊತ್ತಿಲ್ಲ. ಮೋದಿ ಅಂತ ಹೇಳಿದಾಕ್ಷಣ 15 ಲಕ್ಷ ಆಪ್ ಕಿ‌ ಅಕೌಂಟ್ ಗೆ ಪಂದ್ರಾಲಾಕ್ ಡಾಲೂಂಗಾ ಎಂದು ಜನರ ಮನಸ್ಸಿಗೆ ಒಮ್ಮೆಲೆ ಥಟ್ಟನೆ ಬರುತ್ತದೆ. ರೈತರಿಗೆ ಆದಾಯ ದುಪ್ಪಟ್ಟಾಗುತ್ತದೆಂದು ಹೇಳಿದ್ದರು. ಯುವಕರಿಗೆ 2 ಕೋಟಿ ಉದ್ಯೋಗ ಸೃಷ್ಠಿ ಮಾಡುತ್ತೇವೆ ಎಂದಿದ್ದರು. ಇವೆಲ್ಲ ಅವರ ಹಿಂದೆ ದೊಡ್ಡ‌ ಭಾರಗಳಿವೆ. ಬಿಜೆಪಿಯ ಸುಳ್ಳು ಭರವಸೆಗಳಿಂದ ಬೊಮ್ಮಾಯಿ ಎದ್ದು‌ ನಿಲ್ಲಲಾರದಷ್ಟು‌‌ ಅನಾನುಕೂಲತೆ ಎದುರಿಸುತ್ತಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next