Advertisement

ಬಸ್ರೂರು ದೇವಳದಲ್ಲಿ ಮುಖವಾಡ ಕಳವು

10:13 AM Jul 30, 2018 | Team Udayavani |

ಕುಂದಾಪುರ: ತಾಲೂಕಿನ ಬಸ್ರೂರಿನ ಮಹಲಿಂಗೇಶ್ವರ ದೇವಸ್ಥಾನದಲ್ಲಿ ರವಿವಾರ ತಡರಾತ್ರಿ ಕಳ್ಳರು ಕೈಚಳಕ ತೋರಿದ್ದಾರೆ. ಸುಮಾರು 2 ಲಕ್ಷ ಮೌಲ್ಯದ ದುರ್ಗಾಪರಮೇಶ್ವರಿ ದೇವಿಯ ಬೆಳ್ಳಿಯ ಮುಖವಾಡ ಮತ್ತು ಗಣಪತಿ ಮುಖವಾಡಗಳನ್ನು ಕಳ್ಳತನ ಮಾಡಲಾಗಿದೆ. 

Advertisement

ತಡರಾತ್ರಿ ಸುಮಾರು 12 ರಿಂದ1 ಗಂಟೆಯ ಸುಮಾರಿಗೆ ಕಳ್ಳತನ ನಡೆದಿರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ರಾತ್ರಿ 3 ಗಂಟೆ ಸುಮಾರಿಗೆ ಸ್ಥಳಕ್ಕೆ ಕುಂದಾಪುರ ಗ್ರಾಮಾಂತರ ಠಾಣಾಧಿಕಾರಿ ಶ್ರಿಧರ್ ನಾಯಕ್ ಭೆಟಿ ನೀಡಿ ಪರಿಶೀಲಿಸಿದರು. ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಜ್ನರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕುಂದಾಪುರ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Advertisement

Udayavani is now on Telegram. Click here to join our channel and stay updated with the latest news.

Next