Advertisement

ಪುತ್ತೂರು: ಬ್ಯಾಟರಿ ಕಳ್ಳತನ ಪ್ರಕರಣ; ಆರೋಪಿ ಬಂಧನ

01:41 AM Jul 12, 2022 | Team Udayavani |

ಪುತ್ತೂರು: ನಗರದ ಎರಡು ಸಂಸ್ಥೆ ಗಳಿಂದ ಬ್ಯಾಟರಿ ಕಳ್ಳತನ ಮಾಡಿದ ಪ್ರಕರಣದ ಆರೋಪಿ ಯನ್ನು ಪುತ್ತೂರು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

Advertisement

ಕೇರಳ ರಾಜ್ಯದ ಕೊಲ್ಲಂ ಜಿಲ್ಲೆಯ ಇಟ್ಟಿ ಪನ್ನಿಕರ್‌ ಬಂಧಿತ ಆರೋಪಿ. ದರ್ಬೆ ಹಿತ ಆಸ್ಪತ್ರೆ ಹಾಗೂ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಬಳಿಯ ಸಾಯಿ ಲಾಡ್ಜ್ನಿಂದ ಜನರೇಟರ್‌ ಬ್ಯಾಟರಿ ಕದ್ದ ಬಗ್ಗೆ ಪ್ರಕರಣ ದಾಖಲಾಗಿತ್ತು. ಹಿತ ಆಸ್ಪತ್ರೆಯಲ್ಲಿ ಬ್ಯಾಟರಿ ಕಳ್ಳತನ ನಡೆಸಿರುವ ಕೃತ್ಯ ಸಿಸಿ ಟಿವಿಯಲ್ಲಿ ದಾಖಲಾಗಿ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು.

ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಪುತ್ತೂರು ನಗರ ಠಾಣೆ ಪಿಎಸ್‌ಐ ರಾಜೇಶ್‌ ಕೆ.ವಿ. ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next