Advertisement

ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಮನನೊಂದ ಪತ್ನಿಯೂ ನೇಣಿಗ ಶರಣು

03:06 PM Jun 09, 2020 | sudhir |

ಬೈಲಹೊಂಗಲ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಶಿಕ್ಷಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಮನನೊಂದು ಪತ್ನಿಯೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುವ ಮೂಲಕ ಸಾವಿನಲ್ಲೂ ದಂಪತಿ ಒಂದಾದ ಘಟನೆ ತಾಲೂಕಿನ ಅಮಟೂರ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

Advertisement

ಅಮಟೂರ ಪ್ರೌಢಶಾಲೆಯ ಶಿಕ್ಷಕ ಗುರುನಾಥ ತಾವರೆ (೪೦) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೀನಾಕ್ಷಿ (೩೨) ನೇಣು ಬಿಗಿದುಕೊಂಡು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಳಗಾವಿ ರಸ್ತೆಯ ಹೊಲದಲ್ಲಿ ಶಿಕ್ಷಕ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ಕೇಳಿ ಪತ್ನಿ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಶಿಕ್ಷಕ ಗುರುನಾಥ ಖಾನಾಪುರ ತಾಲೂಕಿನ ಚಿಕ್ಕಮುನವಳ್ಳಿಯವರು. ಅವರ ಪತ್ನಿ ಮೀನಾಕ್ಷಿ ಬೆಳಗಾವಿಯವರಾಗಿದ್ದು. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ನಂದಗಡ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಅಮಟೂರ ಪ್ರೌಢಶಾಲೆಗೆ ೬ ತಿಂಗಳ ಹಿಂದೆಯಷ್ಟೇ ಬಂದಿದ್ದ ಶಿಕ್ಷಕ ಗುರುನಾಥ ಮಂಗಳವಾರ ಮುಂಜಾನೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.‌ ಈ ಕುರಿತು ಬೈಲಹೊಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next