Advertisement

BBK11: ಬಿಗ್‌ ಬಾಸ್‌ ಮನೆಯಲ್ಲಿ ಹೊಡೆದಾಟ; ಶೋನಿಂದ ಹೊರಬಿದ್ದ ಜಗದೀಶ್‌ – ರಂಜಿತ್‌?

01:19 PM Oct 16, 2024 | Team Udayavani |

ಬೆಂಗಳೂರು: ಬಿಗ್‌ ಬಾಸ್‌ ಕನ್ನಡ (Bigg Boss Kannada-11) ದೊಡ್ಮನೆಯಲ್ಲಿ ದೊಡ್ಡ ಜಗಳವೇ ಆಗಿದೆ. ದಿನಕಳೆದಂತೆ ಸ್ಪರ್ಧಿಗಳು ಹೊಡೆದಾಡಿಕೊಳ್ಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಕಾರಣದಿಂದ ಇಬ್ಬರು ಸ್ಪರ್ಧಿಗಳನ್ನು ದೊಡ್ಮನೆಯಿಂದ ಆಚೆ ಕಳುಹಿಸಲಾಗಿದೆ ಎಂದು ವರದಿಯಾಗಿದೆ.

Advertisement

ನಿನ್ನೆಯ ಎಪಿಸೋಡ್‌ನಲ್ಲಿ ಜಗದೀಶ್‌ ಅವರ ಮೇಲೆ ಮನೆ ಅವರು ಮುಗಿಬಿದ್ದಿದ್ದರು. ಉಗ್ರಂ ಮಂಜು, ರಂಜಿತ್‌, ಚೈತ್ರಾ ಅವರು ಜಗದೀಶ್‌ ಅವರ ವರ್ತನೆಗೆ ಬೇಸತ್ತು ಅವರೊಂದಿಗೆ ವಾಗ್ವಾದಕ್ಕೆ ಇಳಿದಿದ್ದರು.

ಜಗದೀಶ್‌ ಹೇಳಿದ್ದೇನು?:

ನಾನು ಬಗ್ಗಿದರೆ ಹಿಂದಗಡೆ ನೋಡಿ ಯಾರೋ ನನ್ನ ಬಗ್ಗೆ ಕೆಟ್ಟದಾಗಿ ಮಾತನಾಡ್ತಾನೆ. ನನ್ನ ಇಮೇಜ್ ಡ್ಯಾಮೇಜ್ ಮಾಡೋಕೆ ನಾನಿಲ್ಲಿ ಬಂದಿಲ್ಲ. ಈಗ ಹೋಗ್ತೇನೆ ನಾನು, ನನಗೆ ಗತಿಯಿಲ್ಲದೆ ಇಲ್ಲಿಗೆ ಬಂದಿಲ್ಲ. ನನಗೆ ಯಾರೋ ಹೇಳ್ತಾನೆ ಮೆಂಟಲ್ ನನ್ಮಗ. ನಾನಿಲ್ಲಿ ಗತಿಯಿಲ್ಲದೆ ಬಂದಿಲ್ಲ. ನನಗೂ ನಾಲ್ಕು ಜನಕ್ಕೆ ಊಟ ಹಾಕೋ ಯೋಗ್ಯತೆ ಇದೆ. ಬಾಗಿಲು ಓಪನ್ ಮಾಡಿ ಈಗಲೇ ಹೊರಗಡೆ ಹೋಗ್ತೇನೆ. ನನ್ನ ಲಗೇಜ್ ಇಲ್ಲೇ ಇರಲಿ ಎಂದು ಜಗದೀಶ್ ಅವರು ತನ್ನ ಬಗ್ಗೆ ಆಡಿಕೊಳ್ಳುವ ಸಹ ಸ್ಪರ್ಧಿಗಳ ಬಗ್ಗೆ ಆಕ್ರೋಶ ಹೊರಹಾಕಿದ್ದರು.

Advertisement

ಜಗದೀಶ್ ಅವರು ಮಂಜು ಅವರ ಮೇಲೆ ಗರಂ ಆಗಿದ್ದಾರೆ. ಕ್ಯಾಮರ ಮುಂದೆ ಕೆಟ್ಟದಾಗಿ ಜಗದೀಶ್ ಮಾತನಾಡಿದ್ದಾರೆ. ತಮ್ಮ ಬಟ್ಟೆಯನ್ನು ಜಗದೀಶ್ ಅವರು ಪ್ಯಾಕ್ ಮಾಡಿರುವುದನ್ನು ತೋರಿಸಲಾಗಿತ್ತು.

ಮಂಜು ಹೇಳಿದ್ದೇನು?

ಇಲ್ಲಿ ವೈಯಕ್ತಿಕವಾಗಿ ಟಾರ್ಗೆಟ್ ಮಾಡೋದಲ್ಲ. ಹಲ್ಕಾ ಮಾತನಾಡೋದಲ್ಲ. ಹೋಗ್ತೇನೆ ಹೋಗ್ತೇನೆ ಅಂಥ ಹೇಳೋದಲ್ಲ. ತಿನ್ನೋ ಊಟಕ್ಕೆ ಗೌರವ ಕೊಡಬೇಕು. ಶೋ ಬಗ್ಗೆ ಇಲ್ಲಸಲ್ಲದ್ದು ಹೇಳೋದಲ್ಲ ಎಂದು ಮಂಜು ಇಲ್ಲಿ ಮುಖಾಮುಖಿಯಾಗಿ ಜಗದೀಶ್ ಗೆ ಹೇಳಿದ್ದಾರೆ.

ಬಿಗ್‌ ಬಾಸ್‌ ಮನೆಯಿಂದ ಜಗದೀಶ್‌ – ರಂಜಿತ್‌ ಔಟ್?:

ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದಾಗ ಬಿಗ್‌ ಬಾಸ್‌ ಎಲ್ಲರನ್ನು ಕೂರಿಸಿ ಸಮಾಧಾನ ಮಾಡಲು ಯತ್ನಿಸಿದ್ದರು. ಆದರೆ ಮತ್ತೆ ಜಗದೀಶ್‌ – ರಂಜಿತ್‌ ನಡುವೆ ವಾಗ್ವಾದ ಶುರುವಾಗಿದ್ದು, ಇಬ್ಬರು ಹೊಡೆದಾಡಿಕೊಳ್ಳುವವರೆಗೂ ಇದು ಹೋಗಿದೆ ಎನ್ನಲಾಗಿದೆ. ಇದೇ ಕಾರಣದಿಂದ ದೊಡ್ಮನೆಯಿಂದ ಜಗದೀಶ್‌ ಹಾಗೂ ರಂಜಿತ್‌ ಅವರನ್ನು ಹೊರ ಕಳುಹಿಸಲಾಗಿದೆ ಎಂದು ಹೇಳಲಾಗುತ್ತಿದೆ.

ಮಾನಸ ಅವರ ವಿಚಾರದಲ್ಲಿ ಜಗದೀಶ್‌ ಅವರು ಮಧ್ಯ ಮಾತನಾಡಿದ ಸಂದರ್ಭದಲ್ಲಿ ರಂಜಿತ್‌, ಜಗದೀಶ್‌ ನಡುವೆ ಮಾತಿನ ಚಕಮಕಿ ನಡೆದಿದೆ. ಇದು ಹಲ್ಲೆ ಮಾಡುವವರೆಗೂ ಹೋಗಿದೆ. ಇಬ್ಬರು ಈ ಸಂದರ್ಭದಲ್ಲಿ ಹೊಡೆದಾಡಿಕೊಂಡಿದ್ದು, ನಿಯಮದ ಉಲ್ಲಂಘನೆ ಆದ ಕಾರಣ ಇಬ್ಬರನ್ನೂ ಮನೆಯಿಂದ ಆಚೆ ಕಳುಹಿಸಲಾಗಿದೆ ಎನ್ನಲಾಗುತ್ತಿದೆ.

ಈ ನಡುವೆ ಜಗದೀಶ್‌ ಅವರು ಮನೆಯಿಂದ ಆಚೆ ಬಂದು, ತೆಗೆದುಕೊಂಡಿರುವ ಫೋಟೋವೊಂದು ವೈರಲ್‌ ಆಗುತ್ತಿದೆ. ಇನ್ನೊಂದು ಕಡೆ ರಂಜಿತ್‌ ಅವರಿಗೆ ಎಚ್ಚರಿಕೆ ನೀಡಲಾಗಿದೆ ಎನ್ನಲಾಗಿದ್ದು, ಅವರು ಮನೆಯಿಂದ ಆಚೆ ಬಂದಿಲ್ಲ ಎನ್ನಲಾಗುತ್ತಿದೆ. ಯಾವುದಕ್ಕೂ ವಾಹಿನಿಯಿಂದಲೇ ಅಧಿಕೃತ ವಿಚಾರ ತಿಳಿದುಬರಬೇಕಿದೆ.

ಹುಚ್ಚ ವೆಂಕಟ್‌ ಹಲ್ಲೆ ಘಟನೆ: ಬಿಗ್‌ ಬಾಸ್‌ ಮನೆಯಲ್ಲಿ ಹಲ್ಲೆ ಮಾಡಿದ ಪ್ರಕರಣ ಈ ಹಿಂದೆಯೂ ನಡೆದಿತ್ತು. ಬಿಗ್ ಬಾಸ್‌ ಕನ್ನಡ ಸೀಸನ್ 3ರಲ್ಲಿ ಸಹ ಸ್ಪರ್ಧಿಯ ಮೇಲೆ ಹಲ್ಲೆ ಮಾಡಿದ್ದ ಕಾರಣಕ್ಕೆ ಹುಚ್ಚ ವೆಂಕಟ್ ಶೋನಿಂದ ಆಚೆ ಬಂದಿದ್ದರು. ಇದಾದ ಬಳಿಕ ಬಿಗ್ ಬಾಸ್ ಕನ್ನಡ ಸೀಸನ್ 4ರಲ್ಲಿಯೂ ಅವರನ್ನು ಮನೆಯೊಳಗೆ ಕಳುಹಿಸಲಾಗಿತ್ತು. ಜೊತೆಗೆ ಬೌನ್ಸರ್‌ಗಳೂ ಇದ್ದರು. ಆಗಲೂ ಅಲ್ಲಿದ್ದ ಪ್ರಥಮ್ ಮೇಲೆ ಹಲ್ಲೆ ವೆಂಕಟ್‌ ಹಲ್ಲೆ ಮಾಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next