Advertisement

BBK11: ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ಎಂಟ್ರಿಯಾಗಿ ಬಂದ ಹನುಮಂತ

10:00 AM Oct 20, 2024 | Team Udayavani |

ಬೆಂಗಳೂರು: ಬಿಗ್ ಬಾಸ್ ಕನ್ನಡ (Bigg Boss Kannada-11) ಮನೆಗೆ ಹೊಸ ಸದಸ್ಯ ಆಗಮನವಾಗಿದ್ದಾರೆ. ಈ ಸೀಸನ್ ನಲ್ಲಿ ಮೊದಲ ವೈಲ್ಡ್ ಕಾರ್ಡ್ ಎಂಟ್ರಿಯಾಗಿದೆ.

Advertisement

ಜಗದೀಶ್ ಹಾಗೂ ರಂಜಿತ್ ಅವರನ್ನು ಬಿಗ್ ಬಾಸ್ ನಿಯಮದ ಉಲ್ಲಂಘನೆ ಮಾಡಿದ್ದಕ್ಕಾಗಿ ದೊಡ್ಮನೆಯಿಂದ ಆಚೆ ಕಳುಹಿಸಿದ್ದಾರೆ. ಈ ಶಾಕ್ ನಲ್ಲಿದ್ದ ಮನೆಮಂದಿಗೆ ಹೊಸ ಸದಸ್ಯರ ಆಗಮನದಿಂದ ಸರ್ಪ್ರೈಸ್ ನೀಡಿದ್ದಾರೆ.

ಸರಿಗಮಪ ರಿಯಾಲಿಟಿ ಶೋ ಮೂಲಕ ಜನಮನ್ನಣೆ ಗಳಿಸಿದ ಕುರಿಗಾಹಿ ಹನುಮಂತ ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ಎಂಟ್ರಿ ಆಗಿ ಪ್ರವೇಶ ಪಡೆದಿದ್ದಾರೆ

ಬಿಗ್ ಬಾಸ್ ಹೊಸ ಅಧ್ಯಾಯದಲ್ಲಿ ‌ಮೊದಲ ವೈಲ್ಡ್ ಕಾರ್ಡ್ ಎಂಟ್ರಿ ಎಂದು ಹನುಮಂತ ಡ್ಯಾನ್ಸ್ ಮಾಡುತ್ತಲೇ ಬಿಗ್ ಬಾಸ್ ಮನೆಗೆ ಬಂದಿದ್ದಾರೆ.

Advertisement

ಹನುಮಂತ ನಿಮಗೆ ಬಿಗ್ ಬಾಸ್ ಮನೆಗೆ ಸ್ವಾಗತ ಎಂದಾಗ ಊಟ ಮಾಡುತ್ತಿದ್ದೇನೆ ಮತ್ತೆ ಮಾತನಾಡುತ್ತೇನೆ ಎಂದು ಮುಗ್ಧವಾಗಿ ಉತ್ತರಿಸಿದ್ದಾರೆ. ಇದಲ್ಲದೆ ಬಿಗ್ ಮನೆಗೆ ಬಂದ ಹನುಮಂತ ಈ ಮನೆಯ ಕ್ಯಾಪ್ಟನ್ ಆಗಿದ್ದಾರೆ ಎಂದು ಬಿಗ್ ಬಾಸ್ ಅನೌನ್ಸ್ ಮಾಡಿದ್ದಾರೆ.

ಯಾರು ಈ ಹನುಮಂತು?

ಸರಿಗಮಪ ಸೀಸನ್ – 15 ನಲ್ಲಿ ಕಾಣಿಸಿಕೊಂಪ ಪ್ರತಿಭಾವಂತ ಗಾಯಕ, ಸೋಶಿಯಲ್ ಮೀಡಿಯಾ ಸ್ಟಾರ್ ಆಗಿ ಗುರುತಿಸಿಕೊಂಡ ಹನಮಂತ ಹಾವೇರಿಯ ಚಿಲ್ಲೂರ ಬಡ್ನಿ ಎಂಬ ಪುಟ್ಟ ಗ್ರಾಮದವನು.

ಕುರಿಗಾಹಿ ಅಗಿದ್ದ ಈತ ಕುರಿಗಳನ್ನು ಮೇಯಿಸುತ್ತಲೇ ಹಾಡು ಹಾಡುತ್ತಿದ್ದ, ಸರಿಗಮಪ ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದ. ಅಲ್ಲಿನ ರನ್ನರ್ ಅಪ್ ಆದ ಬಳಿಕ ಜನಮನ್ನಣೆಯನ್ನು ಗಳಿಸಿದ್ದ.

Advertisement

Udayavani is now on Telegram. Click here to join our channel and stay updated with the latest news.

Next