Advertisement

BBK11: ಅಪ್ಪನಿಗೆ ಹುಟ್ಟಿದರೆ ಎನ್ನುವ ಮಾತು.. ಮಾನಸ, ಚೈತ್ರಾಗೆ ಕಿಚ್ಚನಿಂದ ತರಾಟೆ

05:43 PM Oct 19, 2024 | Team Udayavani |

ಬೆಂಗಳೂರು: ಬಿಗ್‌ಬಾಸ್‌ ಕನ್ನಡ -11 (Bigg Boss Kannada-11) ನಲ್ಲಿಂದು (ಅ.19 ರಂದು) ವಾರದ ಕಿಚ್ಚನ ಪಂಚಾಯ್ತಿ ನಡೆಯಲಿದೆ.

Advertisement

ಕನ್ನಡ ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿಗೆ ವಾಗ್ವಾದವೊಂದು ವಿಕೋಪಕ್ಕೆ ತಿರುಗಿ ಒಬ್ಬರಲ್ಲ, ಇಬ್ಬರು ಸ್ಪರ್ಧಿಗಳು ಒಂದೇ ದಿನ ಮನೆಯಿಂದ ಆಚೆ ಹೋಗಿದ್ದಾರೆ. ಜಗದೀಶ್‌ ಹಾಗೂ ರಂಜಿತ್‌ ದೊಡ್ಮನೆಯಿಂದ ವಾರದ ಮಧ್ಯದಲ್ಲೇ ಆಚೆ ಹೋಗಿದ್ದಾರೆ.

ಹೆಣ್ಮಕ್ಕಳ ಬಗ್ಗೆ ಅವಹೇಳನಕಾರಿ ಹಾಗೂ ನಿಂದನೆಯ ಪದಗಳನ್ನು ಬಳಸಿದ್ದರು ಎನ್ನುವ ಕಾರಣಕ್ಕೆ ಜಗದೀಶ್ ಅವರ ಮೇಲೆ ಇಡೀ ಮನೆಯೇ ಗರಂ ಆಗಿತ್ತು.

ಇದನ್ನೂ ಓದಿ: BBK11: ಜಗದೀಶ್ ಗೆ ನ್ಯಾಯ ಸಿಗಬೇಕು.. ವಕೀಲ್ ಸಾಬ್ ಪರ ನಿಂತ ಜನ

ಜಗದೀಶ್‌ ವಿಚಾರ ಆಗಿದ್ದೇನು?: ಹೆಣ್ಮಕ್ಕಳ ‌ಬಗ್ಗೆ ಮಾತನಾಡುವಾಗ ಎಚ್ಚರವೆಂದು ಗೋಲ್ಡ್ ಸುರೇಶ್ ಅವರು ಹೇಳಿದಾಗ, ಜಗದೀಶ್ ಮಾತನಾಡ್ತೀನಿ ನೀನ್ಯಾರೋ ಕೇಳೋಕೆ ಎಂದಿದ್ದರು. ಈ ವೇಳೆ ಚೈತ್ರಾ ಅವರೊಂದಿಗೂ ಜಗದೀಶ್ ವಾಗ್ವಾದಕ್ಕೆ ಇಳಿದಿದ್ದರು. ಇತ್ತ ಹಂಸಾ ಅವರು ಇಲ್ಲಿ ಏನೆಲ್ಲ ಹೇಳಿಸಿಕೊಳ್ಳೋಕ್ಕೆ ನಾವು ರೆಡಿಯಿಲ್ಲ. ನಿನ್ನ ಅಪ್ಪನಿಗೆ ಹುಟ್ಟಿದರೆ ಬಾ ಎಂದು ಚೈತ್ರಾ ಸವಾಲು ಎಸೆದಿದ್ದರು.

Advertisement

ಆ ಪದ ಉಪಯೋಗಿಸಿದ್ದೀರಾ ಇಲ್ವಾ? ಎಂದು ಚೈತ್ರಾ ಜಗದೀಶ್ ಗೆ ಪ್ರಶ್ನೆ ಮಾಡಿದ್ದರು. ತಾಕತ್ತಿದ್ರೆ ಏನೂ ಬೇಕೋ ಅದನ್ನು ಮಾಡ್ಕೋ ಹೋಗು ಎಂದು ಮರು ಪ್ರಶ್ನೆ ಹಾಕಿದ್ದರು.

ಸೀರೆ ಕೊಡ್ತೀನಿ ಹಾಕ್ಕೋ ಎಂದು ಮಾನಸ ಜಗದೀಶ್ ಗೆ ಹೇಳಿದ್ದರು. ಸೀರೆ ಏನಕ್ಕೆ ಹೆಣ್ಣು ಆಗೋಕ್ಕೂ ಈತನಿಗೆ ಯೋಗ್ಯತೆ ಇಲ್ಲ ಎಂದು ಹಂಸಾ ಗರಂ ಆಗಿದ್ದರು. ಇದೇ ವೇಳೆ ರಂಜಿತ್‌ ಅವರ ಜಗದೀಶ್‌ ಅವರನ್ನು ದೂಡಿದ್ದರು.

ಇಡೀ ವಾರ ಮನೆಯಲ್ಲಿ ನಡೆದ ಬೆಳವಣಿಗೆಗಳ ಬಗ್ಗೆ ಸುದೀಪ್‌ ಅವರು ಮಾತನಾಡಿದ್ದು, ಮನೆಯಲ್ಲಿರುವ ಸ್ಪರ್ಧಿಗಳ ಮೇಲೆ ಗರಂ ಆಗಿದ್ದಾರೆ.

ಸುದೀಪ್‌ ಹೇಳಿರುವುದೇನು?: ಕಿಚ್ಚ ಸುದೀಪ್‌ (Kiccha Sudeep) ಜಗದೀಶ್‌ ಅವರ ವರ್ತನೆ ಬಗ್ಗೆ ಮಾತನಾಡುತ್ತಾ, ಅವರೊಂದಿಗೆ ಉಡಾಫೆಯಾಗಿ ವರ್ತಿಸಿದ ಇತರೆ ಸ್ಪರ್ಧಿಗಳಿಗೆ ಕ್ಲಾಸ್‌ ತೆಗದುಕೊಂಡಿದ್ದಾರೆ.

ತಪ್ಪು ಮಾಡಿರುವವರು ಹೊರಗಡೆ ಹೋದರು. ನಿಮ್‌ ಗಳಲ್ಲಿಎಷ್ಟು ಜನ ಸರಿಯಿದ್ದೀರಿ. ಒಬ್ಬ ಚಪ್ಪಲಿ ಎತ್ತಿ ಬಿಸಾಡುತ್ತಿದ್ದಾರೆ ಅಂದ್ರೆ ಅದು ಓಕೆನಾ? ಎಂದಾಗ ಹಂಸಾ ಅವರು ಪ್ರಾಮಾಣಿಕವಾಗಿ ಎಂದು ಮಾತು ಆರಂಭಿಸುವಾಗಲೇ ಅವರ ಮಾತನ್ನು ಅರ್ಧಕ್ಕೇ ತಡೆದ ಕಿಚ್ಚ ಪ್ರಾಮಾಣಿಕ ಎನ್ನುವ ಪದವೇ ಈ ಮನೆಗೆ ಸೂಕ್ತವಾಗಲ್ಲ. ಮಾನಸ ಮೇಡಂ ಮಾತುಗಳಿಂದಲೇ ಈ ಮನೆಯಿಂದ ಒಬ್ಬ ವ್ಯಕ್ತಿ ಹೊರಗಡೆ ಹೋದರು ಅಂದರೆ ನೀವು ಮಾತನಾಡಿದ ಕೆಲ ತಪ್ಪು ಮಾತುಗಳಿಂದ ನಿಮ್ಮನ್ನು ಯಾಕೆ ಒಳಗಡೆ ಇಟ್ಟುಕೊಳ್ಳಬೇಕು. ಚೈತ್ರಾ ಅವರೇ ಹೆಣ್ಮಕ್ಕಳ ಬಗ್ಗೆ ಮಾತನಾಬೇಡಿ ಅಂತೀರಿ ಒಬ್ಬ ಅಪ್ಪನಿಗೆ ಹುಟ್ಟಿದರೆ ಅಂದರೆ ಯಾವ ನನ್ಮಗ ಕೂಡ ಅಪ್ಪನಿಗೆ ಬೈಯ್ತಾ ಇಲ್ಲ ಮೇಡಮ್‌ ತಾಯಿಗೆ ಬೈಯುತ್ತಿರುವುದು ಎಂದು ಕಿಚ್ಚ ಗರಂ ಆಗಿರುವುದನ್ನು ಪ್ರೋಮೊದಲ್ಲಿ ತೋರಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next