Advertisement
ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಹಲವಾರು ಕಾಂಗ್ರೆಸ್-ಜೆಡಿಎಸ್ ಮೈತ್ರಿಯ ಆಡಳಿತ ನಗರದ ಬಡ ಹಾಗೂ ಆರ್ಥಿಕವಾಗಿ ಹಿಂದುಳಿದ ಜನರನ್ನು ಮುಖ್ಯವಾಗಿರಿಸಿಕೊಂಡು ಹಲವಾರು ಜನಪ್ರಿಯ ಯೋಜನೆಗಳನ್ನು ಘೋಷಿಸಿದ್ದು, ಸರ್ಕಾರದಿಂದ ಅನುಮೋದನೆ ನಡೆದರೂ, ಯೋಜನೆಗಳು ಜಾರಿಯಾಗುತ್ತೇಯೇ ಎಂಬ ಪ್ರಶ್ನೆಗಳು ಮೂಡತೊಡಗಿವೆ.
Related Articles
Advertisement
ಆದರೆ, ಪರಿಷ್ಕೃತ ಬಜೆಟ್ಗೆ ಅನುಮೋದನೆ ಸಿಕ್ಕಿದ ನಂತರವೂ ಶೀಘ್ರ ಬಜೆಟ್ನ್ನು ಸರ್ಕಾರಕ್ಕೆ ಕಳುಹಿಸಿ ಅನುಮೋದನೆ ಪಡೆಯುವ ಪ್ರಯತ್ನಕ್ಕೆ ಆಡಳಿತ ಪಕ್ಷವಾಗಲಿ, ಮೇಯರ್ ಆಗಲಿ ಪ್ರಯತ್ನಿಸಿಲ್ಲ. ಇದರ ನಡುವೆಯೇ ಚುನಾವಣಾ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಬಜೆಟ್ಗೆ ಸರ್ಕಾರದಿಂದ ಅನುಮೋದನೆ ದೊರೆಯಲಿಲ್ಲ.
ಲೇಖಾನುದಾನಕ್ಕೆ ಸಮಸ್ಯೆಯಿಲ್ಲ: ಬಜೆಟ್ಗೆ ಅನುಮೋದನೆ ದೊರೆಯದಿದ್ದರೂ ಪಾಲಿಕೆಯ ದಿನ ನಿತ್ಯ ಕಾರ್ಯಗಳಿಗೆ ಯಾವುದೇ ಅಡ್ಡಿಯಿಲ್ಲ. ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ ಹಾಗೂ ಸಿಬ್ಬಂದಿಗೆ ವೇತನ ಹಾಗೂ ಇತರೆ ಕೆಲಸಗಳಿಗೆ ಅನುದಾನ ಬಳಸಿಕೊಳ್ಳಬಹುದಾಗಿದೆ.