Advertisement

ಬಿಬಿಎಂಪಿ ಚುನಾವಣೆ: ವಿಚಾರಣೆ ಮುಂದೂಡಿದ ಹೈಕೋರ್ಟ್‌

12:16 PM Nov 21, 2020 | Suhan S |

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಗೆ ಶೀಘ್ರ ಚುನಾವಣೆ ನಡೆಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ವಾದ ಮಂಡಿಸಲು ಕಾಲಾವಕಾಶ ನೀಡುವಂತೆ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮನವಿ ಮಾಡಿದೆ. ಮನವಿ ಒಪ್ಪಿದ ಹೈಕೋರ್ಟ್‌ ವಿಚಾರಣೆಯನ್ನು ನ.25ಕ್ಕೆ ಮುಂದೂಡಿದೆ.

Advertisement

ಅವಧಿ ಮುಗಿದಿರುವ ಬಿಬಿಎಂಪಿಗೆ ಶೀಘ್ರ ಚುನಾವಣೆ ನಡೆಸುವಂತೆ ಕೋರಿ ಪಾಲಿಕೆಯ ಕಾಂಗ್ರೆಸ್‌ ಮಾಜಿ ಸದಸ್ಯ ಶಿವರಾಜ್‌ ಹಾಗೂ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್‌ಓಕ್‌ ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ಅವಧಿ ಮುನ್ನವೇ ಚುನಾವಣೆ: ಈ ವೇಳೆ ಅರ್ಜಿದಾರರ ಪರ ವಾದಿಸಿದ ಹಿರಿಯ ವಕೀಲರಾದ ಪ್ರೊ. ರವಿವರ್ಮ ಕುಮಾರ್‌, ಸರ್ಕಾರ ಚುನಾವಣೆ ಮುಂದೂಡುವ ಉದ್ದೇಶದಿಂದಲೇ ಪಾಲಿಕೆಯ ವಾರ್ಡ್‌ ಗಳ ಸಂಖ್ಯೆ ಹೆಚ್ಚಿಸಲು ಮುಂದಾಗಿದೆ. ಸಂವಿಧಾನ ವಿಧಿ 243 ರ ನಿಯಮಗಳ ಪ್ರಕಾರ ಚುನಾಯಿತ ಪ್ರತಿನಿಧಿಗಳ ಅವಧಿಮುಗಿಯುವ ಮುನ್ನವೇ ಚುನಾವಣೆ ನಡೆಸಬೇಕು. ಆದರೆ, ಸರ್ಕಾರ

ಚುನಾವಣೆ ಮುಂದೂಡಲು ಒಂದಲ್ಲ ಒಂದು ನೆಪ ಹೇಳಿ ಕೊಂಡು ಬರುತ್ತಿದೆ. ಚುನಾವಣೆ ನಡೆಸಲು ಜನರು ಕೋರ್ಟ್‌ಗೆ ಅರ್ಜಿ ಹಾಕಬೇಕು ಅಥವಾ ಚುನಾವಣಾ ಆಯೋಗ ನಿರ್ದೇಶಕೇಳಿಕೊಂಡು ಬರಬೇಕಾದ ಪರಿಸ್ಥಿತಿ ನಿರ್ಮಿಸಿದೆ. ಇಂತಹ ಪರಿಸ್ಥಿತಿ ನಿರ್ಮಮಿಸಿರುವ ಸರ್ಕಾರದ ಕ್ರಮ ಖಂಡನೀಯ.

ಅವಧಿಗೆ ಮುನ್ನ ಆಡಳಿತಾಧಿಕಾರಿ ನೇಮಕ: ವಿಶೇಷ ಕಾರಣಗಳ ಹೊರತು ಚುನಾಯಿತ ಸದಸ್ಯರ ಅವಧಿ ಮುಗಿಯುವ ಮುನ್ನ ಆಡಳಿತಾಧಿಕಾರಿ ನೇಮಿಸುವುದಕ್ಕೆ ಅವಕಾಶವಿಲ್ಲ. ಹಾಗಿದ್ದೂ ಸರ್ಕಾರ ಪಾಲಿಕೆಗೆ ಅವಧಿಗೆ ಮುನ್ನ ಆಡಳಿತಾಧಿಕಾರಿ ನೇಮಿಸಿದೆ. ಇನ್ನು ಆಡಳಿತಾಧಿಕಾರಿಯನ್ನು 6 ತಿಂಗಳಿಗಿಂತ ಹೆಚ್ಚಿನ ಅವಧಿಗೆ ನೇಮಿಸಲು ಅವಕಾಶ ವಿಲ್ಲ. ಹೀಗಾಗಿ ಪಾಲಿಕೆಗೆ ಚುನಾ ವಣೆ ನಡೆಸಲು ನಿರ್ದೇಶಿಸಬೇಕು ಎಂದು ಕೋರಿದರು.

Advertisement

ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್‌ ಫಣೀಂದ್ರ ವಾದಿಸಿ, ಬಿಬಿಎಂಪಿ ಗೆ ಚುನಾವಣೆ ನಡೆಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಮತದಾರರ ಪಟ್ಟಿ ಪ್ರಕಟಿಸುವುದಷ್ಟೇ ಬಾಕಿಯಿದೆ. ಮತದಾರರ ಪಟ್ಟಿ ತಯಾರಿಕೆಗೆ3 ಕೋಟಿ ವೆಚ್ಚವಾಗಿದೆ. ವಾರ್ಡ್‌ಸಂಖ್ಯೆ ಹೆಚ್ಚಿಸಿದರೆ ಚುನಾವಣೆ ಮತ್ತೂಂದು ವರ್ಷ ವಿಳಂಬವಾಗಲಿದೆ. ಕ್ಷೇತ್ರ ಪುನರ್‌ ವಿಂಗಡಣೆಗೆ ನಾಲ್ಕು ತಿಂಗಳು ಹಿಡಿಯಲಿದೆ ಎಂದರು.

ಅಲ್ಲದೇ, 2015ರ ಚುನಾವಣೆಯನ್ನು 2001ರ ಜನಗಣತಿ ಆಧಾರದಲ್ಲೇ ನಡೆಸಲಾಗಿತ್ತು. ಆದರೆ ಸರ್ಕಾರ ಇದೀಗ 2011 ರ ಜನಗಣತಿ ಆಧಾರದಲ್ಲಿ ವಾರ್ಡ್‌ ವಿಂಗಡಣೆ ಮಾಡಲು ಮುಂದಾಗಿದೆ. ಅಷ್ಟಕ್ಕೂ ಸರ್ಕಾರ ಪಾಲಿಕೆಯ ವ್ಯಾಪ್ತಿಯನ್ನು ವಿಸ್ತರಿಸುತ್ತಿಲ್ಲ. ಬದಲಿಗೆ198 ವಾರ್ಡ್‌ ಗಳನ್ನೇ243 ವಾರ್ಡ್‌ ಗಳಾಗಿ ಮರು ವಿಂಗಡಿಸಲು ಮುಂದಾಗಿದೆ ಎಂದರು.

ಈ ವೇಳೆ ಸರ್ಕಾರದ ಪರ ಹಾಜರಿದ್ದ ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ ನಾವದಗಿ ಅವರು ವಾದಮಂಡನೆಗೆ ಕಾಲಾವಕಾಶ ಕೋರಿದರು. ಈ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ವಾದ ಮಂಡಿಸಲು ಸಮಯಾವಕಾಶ ನೀಡಿ ವಿಚಾರಣೆಯನ್ನು ನ.25ಕ್ಕೆ ಮುಂದೂಡಿತು.

Advertisement

Udayavani is now on Telegram. Click here to join our channel and stay updated with the latest news.

Next