Advertisement

ವಾಲಿದ ಕಟ್ಟಡ ತೆರವು ಆರಂಭಿಸಿದ ಬಿಬಿಎಂಪಿ

11:55 AM Dec 08, 2018 | Team Udayavani |

ಬೆಂಗಳೂರು/ಮಹದೇವಪುರ: ಕಟ್ಟಡ ನಿಯಮಗಳು ಗಾಳಿಗೆ ತೋರಿ ಮಾರತಹಳ್ಳಿಯ ಅಶ್ವತ್ಥನಗರದಲ್ಲಿ ನಿರ್ಮಾಣ ಮಾಡಲಾಗಿದ್ದ ನಾಲ್ಕು ಅಂತಸ್ತಿನ ಕಟ್ಟಡ ಗುರುವಾರ ರಾತ್ರಿ ವಾಲಿದ ಪ್ರಕರಣ ಸಂಬಂಧ, ಕಾನೂನು ಮೀರಿ ಕಟ್ಟಡ ನಿರ್ಮಿಸಿದ ಮಾಲೀಕ ಹಾಗೂ ಗುತ್ತಿಗೆದಾರರನ್ನು ಎಚ್‌ಎಎಲ್‌ ಪೊಲೀಸರು ಬಂಧಿಸಿದ್ದಾರೆ. 

Advertisement

ಇದರೊಂದಿಗೆ ಮುಂಜಾಗ್ರತಾ ಕ್ರಮವಾಗಿ ಕಟ್ಟಡ ತೆರವು ಕಾರ್ಯಾಚರಣೆಯನ್ನು ಬಿಬಿಎಂಪಿ ಆರಂಭಿಸಿದೆ. ಕಟ್ಟಡ ಮಾಲೀಕ ಶಿವಪ್ರಸಾದ್‌ ನೆಲಮಹಡಿ ಸೇರಿ ಒಟ್ಟು ಮೂರು ಅಂತಸ್ತಿನ ಕಟ್ಟಡ ನಿರ್ಮಾಣಕ್ಕೆ ಬಿಬಿಎಂಪಿಯಿಂದ ನಕ್ಷೆ ಪಡೆದುಕೊಂಡಿದ್ದರು. ಆದರೆ, ಕಾನೂನು ಬಾಹಿರವಾಗಿ ನಾಲ್ಕು ಅಂತಸ್ತಿನ ಕಟ್ಟಡ ನಿರ್ಮಿಸಿದ್ದು, ನಿಯಮಗಳನ್ನು ಉಲ್ಲಂ ಸಿದರಿಂದಾಗಿ ಕಟ್ಟಡ ವಾಲಿದೆ ಎಂದು ಪಾಲಿಕೆಯ ಅಧಿಕಾರಿಗಳು ತಿಳಿಸಿದ್ದಾರೆ. 

ಕೇವಲ ಮೂರು ತಿಂಗಳ ಹಿಂದೆ ಕಾಮಗಾರಿ ಪೂರ್ಣಗೊಂಡಿದ್ದ ಕಟ್ಟಡದ ಗೋಡೆಯಲ್ಲಿ ಇತ್ತೀಚೆಗೆ ಬಿರುಕು ಕಾಣಿಸಿಕೊಂಡಿದ್ದು, ಗುರುವಾರ ರಾತ್ರಿ ಏಕಾಏಕಿ ಕಟ್ಟಡ ವಾಲಿದೆ. ಇದರಿಂದಾಗಿ ಒಂದು ಭಾಗದ ಕಂಬಗಳು ಮುರಿದಿದ್ದು, ಸಂಪೂರ್ಣ ಕಟ್ಟಡ ಕುಸಿಯುವ ಆತಂಕ ಶುರುವಾಗಿದೆ.

ಆ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದು, ಕಟ್ಟಡ ನಿಮಯಗಳನ್ನು ಉಲ್ಲಂ ಸಿರುವುದು ಕಂಡುಬಂದಿದೆ. ಆ ಹಿನ್ನೆಲೆಯಲ್ಲಿ ಕಟ್ಟಡ ಮಾಲೀಕ ಶಿವಪ್ರಸಾದ್‌ ಹಾಗೂ ಕಟ್ಟಡ ನಿರ್ಮಾಣ ಗುತ್ತಿಗೆದಾರ ವೆಂಕಟೇಶಪ್ಪ ಎಂಬುವವರ ವಿರುದ್ಧ ಎಚ್‌ಎಎಲ್‌ ಠಾಣೆಗೆ ದೂರು ನೀಡಿದ್ದಾರೆ. 

ಅಕ್ಕ-ಪಕ್ಕದ ನಿವಾಸಿಗಳ ಸ್ಥಳಾಂತರ: ಕಟ್ಟಡ ವಾಲಿನ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪಾಲಿಕೆಯ ಅಧೀಕಾರಿಗಳು, ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ರಾತ್ರಿಯೇ ಸ್ಥಳಕ್ಕೆ ತೆರಳಿದ್ದು, ಕಟ್ಟಡದಲ್ಲಿದ್ದ 40 ಮಂದಿ ಹಾಗೂ ಅಕ್ಕ-ಪಕ್ಕದ ಕಟ್ಟಡಗಳಲ್ಲಿ ವಾಸವಿರುವವರನ್ನು ಸ್ಥಳಾಂತರ ಮಾಡಿಸಿದ್ದಾರೆ. 

Advertisement

ಎರಡು ದಿನದಲ್ಲಿ ತೆರವು: ಶುಕ್ರವಾರ ಬೆಳಗ್ಗೆಯಿಂದ ಕಟ್ಟಡ ತೆರವು ಕಾರ್ಯಾಚರಣೆ ಆರಂಭವಾಗಿದ್ದು, ನಾಲ್ಕು ಅಂತಸ್ತಿನ ಕಟ್ಟಡವಾದ್ದರಿಂದ ಯಂತ್ರೋಪಕರಣಗಳನ್ನು ಬಳಿಸಿದರೆ, ಅಕ್ಕ-ಪಕ್ಕದ ಮನೆಗಳಿಗೆ ಹಾನಿಯಾಗುವ ಸಾಧ್ಯತೆಯಿದೆ ಎಂಬ ಕಾರಣದಿಂದ ಸಿಬ್ಬಂದಿಯಿಂದ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ.

ಅದರಂತೆ ಶನಿವಾರದಿಂದ ಸಣ್ಣ ಯಂತ್ರಗಳ ಮೂಲಕ ತೆರವು ಕಾರ್ಯಾಚರಣೆ ನಡೆಸಿ 2-3 ದಿನದೊಳಗಾಗಿ ಕಟ್ಟಡ ಸಂಪೂರ್ಣ ತೆರವುಗೊಳಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಕಟ್ಟಡ ನಿಯಮಾವಳಿಗಳನ್ನು ಉಲ್ಲಂ ಸಿ ನಾಲ್ಕು ಅಂತಸ್ತಿನ ಕಟ್ಟಡ ನಿರ್ಮಿಸಿರುವ ಮಾಲೀಕನ ಮೇಲೆ ಎಚ್‌ಎಎಲ್‌ ಪೊಲೀಸರು ಎಫ್ಐಆರ್‌ ದಾಖಲಿಸಿದ್ದು, ಗುತ್ತಿಗೆದಾರರನ್ನೂ ಬಂಧಿಸಿದ್ದಾರೆ. ಕಾನೂನು ಬಾಹಿರವಾಗಿ ಕಟ್ಟಡಗಳು ನಿರ್ಮಾನವಾಗುತ್ತಿದ್ದರೂ ಯಾವುದೇ ಕ್ರಮಕೈಗೊಳ್ಳದ ಪಾಲಿಕೆಯ ಎಂಜಿನಿಯರ್‌ ವಿರುದ್ಧವೂ ಕ್ರಮಕೈಗೊಳ್ಳಲಾಗುವುದು. ಪಾಲಿಕೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಕಟ್ಟಡ ನೆಲಸಮ ಮಾಡುವ ಕಾರ್ಯದಲ್ಲಿ ನಿರತರಾಗಿದ್ದಾರೆ. 
-ಗಂಗಾಂಬಿಕೆ, ಮೇಯರ್‌

Advertisement

Udayavani is now on Telegram. Click here to join our channel and stay updated with the latest news.

Next