Advertisement

ಉತ್ತರ ಕರ್ನಾಟಕದ ನೆರೆ ಪೀಡಿತ ಪ್ರದೇಶದ ಜನರಿಗೆ ಬಿಬಿಎಂಪಿಯಿಂದ ನೆರವು

09:49 AM Aug 09, 2019 | keerthan |

ಬೆಂಗಳೂರು : ಅತಿವೃಷ್ಟಿಯಿಂದಾಗಿ ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದ್ದು, ನೆರೆ ಪೀಡಿದ ಪ್ರದೇಶದ ಜನರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಹಾಯಹಸ್ತ ಚಾಚಿದೆ.

Advertisement

ಪಾಲಿಕೆಯ ಎಲ್ಲಾ 198 ಸದಸ್ಯರ ಒಂದು ತಿಂಗಳ ಗೌರವ ಧನ 16.80 ಲಕ್ಷ ರೂ. ಮುಖ್ಯಮಂತ್ರಿಗಳ ನೆರೆ ಪರಿಹಾರ ನಿಧಿಗೆ ನೀಡುವುದಾಗಿ ಮೇಯರ್ ಗಂಗಾಂಬಿಕೆ ತಿಳಿಸಿದ್ದಾರೆ.

ಈ ಹಿಂದೆ ಕೊಡಗಿನಲ್ಲಿ ಅತಿವೃಷ್ಟಿಯಿಂದ ಉಂಟಾಗಿದ್ದ ಸಮಸ್ಯೆಗೂ ಬಿಬಿಎಂಪಿ ಸ್ಪಂದಿಸಿ ಧನಸಹಾಯ ಮಾಡಿತ್ತು. ಈ ಬಾರಿ ಉತ್ತರ ಕರ್ನಾಟಕದ ಜಿಲ್ಲೆಗಳಿಗೂ ಪ್ರವಾಹ ಪರಿಸ್ಥಿತಿ ಉಂಟಾಗಿರುವುದರಿಂದ ಬಿಬಿಎಂಪಿ ಧನ ಸಹಾಯ ಮಾಡುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next