Advertisement

ಬಿಬಿಎಂಪಿ ಸ್ಥಾಯಿ ಸಮಿತಿ ಚುನಾವಣೆ ಮುಂದಕ್ಕೆ

11:03 AM Oct 27, 2017 | Team Udayavani |

ಬೆಂಗಳೂರು: ಆಡಳಿತ ಪಾಲುದಾರ ಪಕ್ಷ ಜೆಡಿಎಸ್‌ ಮನವಿಯಂತೆ ಬಿಬಿಎಂಪಿ ಸ್ಥಾಯಿ ಸಮಿತಿ ಚುನಾವಣೆ ಮುಂದೂಡಲು ಕಾಂಗ್ರೆಸ್‌ ತೀರ್ಮಾನಿಸಿದೆ. ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ನಡೆದ ಸಭೆಯಲ್ಲಿ, ಸ್ಥಾಯಿ ಸಮಿತಿ ಚುನಾವಣೆ ಮುಂದೂಡುವ ಬಗ್ಗೆ ಒಮ್ಮತದ ತೀರ್ಮಾನ ತೆಗೆದುಕೊಳ್ಳಲಾಗಿದೆ.

Advertisement

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌, “ಬಿಬಿಎಂಪಿ ಸ್ಥಾಯಿ ಸಮಿತಿಗೆ ಶುಕ್ರವಾರ ಚುನಾವಣೆ ನಡೆಯಬೇಕಿತ್ತು. ಆದರೆ, ಚುನಾವಣೆ ಮುಂದೂಡುವ ಕುರಿತ ಜೆಡಿಎಸ್‌ ಮನವಿಯಂತೆ ತೀರ್ಮಾನ ಕೈಗೊಂಡಿದ್ದು, ವಾರದೊಳಗೆ ಚುನಾವಣೆ ನಡೆಯಲಿದೆ,’ ಎಂದರು.

“ಪ್ರಾದೇಶಿಕ ಆಯುಕ್ತರಿಗೆ ಈ ಕುರಿತು ಮನವಿ ಸಲ್ಲಿಸಲಿದ್ದು, ಅವರು ಕಾನೂನಿನಂತೆ ಕ್ರಮ ಕೈಗೊಳ್ಳುತ್ತಾರೆ. ಯಾರಿಗೆ ಯಾವ ಸಮಿತಿ ಕೊಡಬೇಕು ಎಂದು ತೀರ್ಮಾನವಾಗಿದೆ,’ ಎಂದು ಹೇಳಿದರು. ಸಭೆಯಲ್ಲಿ ಸಚಿವರಾದ ರಾಮಲಿಂಗಾರೆಡ್ಡಿ, ಕೃಷ್ಣಭೈರೇಗೌಡ, ರೋಷನ್‌ಬೇಗ್‌, ಶಾಸಕರಾದ ಎನ್‌.ಎ. ಹ್ಯಾರಿಸ್‌, ಮುನಿರತ್ನ, ಎಸ್‌.ಟಿ. ಸೋಮೇಶಖರ್‌, ಆರ್‌.ವಿ. ದೇವರಾಜ್‌, ಪಿ.ಆರ್‌. ರಮೇಶ್‌, ಭೈರತಿ ಸುರೇಶ್‌,ಮೇಯರ್‌ ಸಂಪತ್‌ರಾಜ್‌ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next