Advertisement

ಬಿಬಿಎಂಪಿ ನೂತನ ಆಯುಕ್ತರಾಗಿ ಮಂಜುನಾಥ್‌ ಪ್ರಸಾದ್‌ ನೇಮಕ

12:22 PM Jul 19, 2020 | sudhir |

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ನೂತನ ಆಯುಕ್ತರನ್ನಾಗಿ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಎನ್‌. ಮಂಜುನಾಥ್‌ ಪ್ರಸಾದ್‌ ಅವರನ್ನು ನೇಮಕ ಮಾಡಿ ಸರಕಾರ ಆದೇಶ ಮಾಡಿದೆ.

Advertisement

ಹಾಲಿ ಆಯುಕ್ತ ಬಿ.ಎಚ್‌.ಅನಿಲ್‌ಕುಮಾರ್‌ ಅವರು ನೇಮಕವಾಗುವ ಮುನ್ನ ಮಂಜುನಾಥ್‌ ಪ್ರಸಾದ್‌ ಅವರೇ ಆಯುಕ್ತರಾಗಿದ್ದರು. ಈ ಹಿಂದೆ ಪಾಲಿಕೆ ಮತ್ತು ಸರಕಾರದ ಮಟ್ಟದಲ್ಲಿ ಮೂರು ಭಿನ್ನ ಪಕ್ಷಗಳಿದ್ದಾಗಲೂ ಜವಾಬ್ದಾರಿ ನಿರ್ವಹಿಸಿದ್ದ ಹಾಗೂ ಪಾಲಿಕೆಯಲ್ಲಿ ಸುದೀರ್ಘ‌ ಸೇವೆ ಸಲ್ಲಿಸಿದ ಅನುಭವ ಮಂಜುನಾಥ್‌ ಪ್ರಸಾದ್‌ ಅವರಿಗಿದೆ.

ಕಂದಾಯ ಇಲಾಖೆ ಹಾಗೂ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣ ಸಮಿತಿ, ಭೂಮಿ ಯೋಜನೆ, ಯುಪಿಒಆರ್‌ನ ಪ್ರಧಾನ ಕಾರ್ಯ ದರ್ಶಿಯಾಗಿಯೂ ಮಂಜುನಾಥ್‌ ಪ್ರಸಾದ್‌ ಮುಂದುವರಿಯಲಿದ್ದಾರೆ. ಬಿ.ಎಚ್‌. ಅನಿಲ್‌ಕುಮಾರ್‌ ಅವರನ್ನು ಸಾರ್ವಜನಿಕ ಉದ್ಯಮಗಳ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next