Advertisement

ರಾಜೀನಾಮೆ ನೀಡಿದ್ದಕ್ಕೆ ಕ್ಷಮೆ ಕೇಳಿದ ಬಿ.ಸಿ.ಪಾಟೀಲ

07:27 AM Jul 08, 2019 | Team Udayavani |

ಹಾವೇರಿ: ಶಾಸಕ ಸ್ಥಾನಕ್ಕೆ ರಾಜೀನಾಮೆ ಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಹಿರೇಕೆರೂರು ಶಾಸಕ ಬಿ.ಸಿ. ಪಾಟೀಲ ಸಾಮಾಜಿಕ ಜಾಲತಾಣದ ಮೂಲಕ ತಮ್ಮ ಕ್ಷೇತ್ರದ ಮತದಾರರಲ್ಲಿ ಕ್ಷಮೆ ಯಾಚಿಸಿದ್ದಾರೆ. “ಆತ್ಮೀಯ ಬಂಧುಗಳೇ, ರಾಜಕೀಯ ಗೊತ್ತಿಲ್ಲದ ನನಗೆ ಆಕಸ್ಮಿಕವಾಗಿ ರಾಜಕಾರಣಕ್ಕೆ ಬಂದಾಗ ಮೂರು ಬಾರಿ ಶಾಸಕನಾಗಿ ಆಯ್ಕೆ ಮಾಡಿದ್ದೀರಿ.

Advertisement

ಈವರೆಗೂ ನಾನು ನನ್ನ ಕೈಲಾದ ಅಭಿವೃದ್ಧಿ ಕೆಲಸವನ್ನು ಸರ್ಕಾರದಿಂದ ಮಾಡಿ ತಾಲೂಕು ಅಭಿವೃದ್ಧಿ ಕಡೆಗೆ ದಾಪುಗಾಲಿಟ್ಟಿದೆ. ಈಗ ತಮ್ಮೆಲ್ಲರಿಗೂ ಗೊತ್ತಿರುವ ಹಾಗೆ ನಮ್ಮ ತಾಲೂಕಿಗೆ ಸಾಕಷ್ಟು ಅನ್ಯಾಯ ಮಾಡಿರುವ ಕಾಂಗ್ರೆಸ್‌ ಪಕ್ಷ, ಬೇರೆಯವರಿಗೆ ಮಂತ್ರಿ ಪದವಿ ಕೊಟ್ಟು ನಮ್ಮ ತಾಲೂಕಿಗೆ ದೊಡ್ಡ ದ್ರೋಹ ಮಾಡಿದೆ.

ಇದರಿಂದ ತಾಲೂಕಿನ ಸರ್ವತೋಮುಖ ಅಭಿವೃದ್ಧಿ ಕುಂಠಿತವಾಗಿದೆ. ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗಾಗಿ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ತಮ್ಮ ಕ್ಷಮೆ ಇರಲಿ. ಮುಂದಿನ ದಿನಗಳಲ್ಲಿ ತಮ್ಮ ಸಲಹೆ ಸೂಚನೆ ಪಡೆದು ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ. ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಯೇ ನನ್ನ ಗುರಿ. ಸದಾ ನಿಮ್ಮ ಆಶೀರ್ವಾದ ಬೇಕೆಂದು ಕೇಳಿ ಮತ್ತೂಮ್ಮೆ ತಮ್ಮಲ್ಲಿ ಕ್ಷಮೆ ಕೇಳಿ ತಮ್ಮ ಆಶೀರ್ವಾದ ಬೇಡುತ್ತಿದ್ದೇನೆ’ ಎಂದು ಬಿ.ಸಿ. ಪಾಟೀಲ ಉಲ್ಲೇಖೀಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next