Advertisement

ಲಾಕ್ ಡೌನ್ ಇನ್ನೊಂದು ವಾರ ಮುಂದುವರೆಸುವ ಅವಶ್ಯಕತೆಯಿದೆ : ಬಿ.ಸಿ ಪಾಟೀಲ್

04:10 PM May 15, 2021 | Team Udayavani |

ಕೊಪ್ಪಳ: ರಾಜ್ಯದಲ್ಲಿ ಬೆಂಗಳೂರಿನಲ್ಲಿ ಸೋಂಕಿನ ಪ್ರಮಾಣ ಇಳಕೆಯಾಗಿದೆ. ಇತರೆ ಜಿಲ್ಲೆಯಲ್ಲಿ ಸೋಂಕು ಹೆಚ್ಚಾಗುತ್ತಿದ್ದು, ಮೇ.24 ರ ಬಳಿಕ ಇನ್ನೊಂದು ವಾರ ಲಾಕ್ ಡೌನ್ ಮುಂದುವರೆಸುವ ಅವಶ್ಯಕತೆಯಿದೆ ಎಂದು ಕೃಷಿ ಸಚಿವ ಬಿ ಸಿ ಪಾಟೀಲ್ ಅವರು ಹೇಳಿದರು.

Advertisement

ಕೊಪ್ಪಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ನಾನು ಸಿಎಂ ಅವರೊಂದಿಗೆ ಮಾತನಾಡುವೆ. ಇನ್ನೊಂದು ವಾರ ಕಟ್ಟು ನಿಟ್ಟಾಗಿ ಜಾರಿಗೆ ಮನವಿ ಮಾಡುವೆ. ಕೊಪ್ಪಳ ಜಿಲ್ಲೆಯಲ್ಲಿ ಲಾಕ್ ಡೌನ್ ನಿಯಮ ಉಲ್ಲಂಘಿಸುವವರ ವಿರುದ್ದ ಕ್ರಮಕ್ಕೆ ಎಸ್ಪಿಗೆ ಸೂಚನೆ ನೀಡುವೆನು ಎಂದರು.

ಇದನ್ನೂ ಓದಿ : ಉಸಿರಾಟದ ತೊಂದರೆಯಿಂದ ವ್ಯಕ್ತಿ ಸಾವು :ವೈದ್ಯರನ್ನು ನೂಕಾಡಿದ ಸಂಬಂಧಿಕರು

ಉಪ ಚುನಾವಣೆಯಿಂದ ಸೋಂಕು ಹೆಚ್ಚಾಗಿದೆ ಎನ್ನಲಾಗದು. ಅದು ಬೇರೆ ಇದು ಬೇರೆ. ರಾಜ್ಯದ ಹಲವು ಕಡೆಯಲ್ಲಿ ದೊಡ್ಡ ದೊಡ್ಡವರೇ ಸಾವನ್ನಪ್ಪುತ್ತಿದ್ದಾರೆ ಎಂದರಲ್ಲದೇ ಕೊಪ್ಪಳ ಜಿಲ್ಲೆಗೆ ಆಕ್ಸಿಜನ್ ಹಂಚಿಕೆಯ ಪ್ರಮಾಣ ಹೆಚ್ಚಿಸುವ ಕುರಿತಂತೆ ಜಿಲ್ಲೆಯಲ್ಲಿ ಸೋಂಕಿತರು ದಾಖಲಾಗುವ ಸ್ಥಿತಿಗತಿ ಅವಲೋಕಿಸಿ ಅವಶ್ಯಕತೆ ಇದ್ದಲ್ಲಿ ಅಧಿಕಾರಿಗಳ ಜೊತೆಗೆ ಮಾತನಾಡಿ ಸರ್ಕಾರಕ್ಕೆ ಪತ್ರ ಬರೆದು ಕೇಳಿಕೊಳ್ಳುತ್ತೇವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next