Advertisement

BC Road: ಸ್ಕೂಟರ್‌ ಢಿಕ್ಕಿ ಹೊಡೆದು ಪಾದಚಾರಿ ಗಾಯ

08:59 PM Jan 30, 2024 | Team Udayavani |

ಬಂಟ್ವಾಳ: ಬಿ.ಸಿ.ರೋಡಿನ ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದ ಬಳಿ ಸ್ಕೂಟರ್‌ ಢಿಕ್ಕಿ ಹೊಡೆದು ಪಾದಚಾರಿಯೊಬ್ಬರು ಗಾಯಗೊಂಡ ಘಟನೆ ಜ. 28ರಂದು ಸಂಭವಿಸಿದೆ.

Advertisement

ಬಿ.ಮೂಡ ಗ್ರಾಮ ನಿವಾಸಿ ಪ್ರಮೋದ್‌ ಕುಮಾರ್‌ ಗಾಯಗೊಂಡವರು. ಅವರು ಹೆದ್ದಾರಿ ಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಮಹಮ್ಮದ್‌ ಮೊಹಿದ್ದೀನ್‌ ಜುನೈದ್‌ ಚಲಾಯಿಸುತ್ತಿದ್ದ ಸ್ಕೂಟರ್‌ ಢಿಕ್ಕಿ ಹೊಡೆದಿತ್ತು. ತೀವ್ರ ಗಾಯಗೊಂಡ ಪ್ರಮೋದ್‌ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆಯ ಕುರಿತು ಪ್ರಮೋದ್‌ ಅವರ ಪುತ್ರ ಪ್ರದೀಪ್‌ ಕುಮಾರ್‌ ಪೊಲೀಸರಿಗೆ ದೂರು ನೀಡಿದ್ದು, ಸವಾರ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಸವಾರಿ ಮಾಡಿಕೊಂಡು ಬಂದು ಢಿಕ್ಕಿ ಹೊಡೆದಿದ್ದಾನೆ ಎಂದು ಆರೋಪಿಸಲಾಗಿದೆ.

ಬಂಟ್ವಾಳ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next