Advertisement

ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಗೆ ಟೀಂ ಇಂಡಿಯಾ ಪ್ರಕಟ:15ತಿಂಗಳ ಬಳಿಕ ತಂಡಕ್ಕೆ ಮರಳಿದ ರಹಾನೆ

12:53 PM Apr 25, 2023 | Team Udayavani |

ಮುಂಬೈ: ಬಹುನಿರೀಕ್ಷಿತ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯಕ್ಕೆ ಭಾರತ ತಂಡವನ್ನು ಆಯ್ಕೆ ಮಾಡಲಾಗಿದೆ. ಬಿಸಿಸಿಐ ಇಂದು 15 ಜನರ ತಂಡ ಪ್ರಕಟಿಸಿದ್ದು, ನಿರೀಕ್ಷೆಯಂತೆ ರಿಷಭ್ ಪಂತ್, ಶ್ರೇಯಸ್ ಅಯ್ಯರ್ ಮತ್ತು ಜಸ್ಪ್ರೀತ್ ಬುಮ್ರಾ ತಂಡದಲ್ಲಿ ಸ್ಥಾನ ಪಡೆದಿಲ್ಲ.

Advertisement

ತಂಡದಿಂದ ಹೊರಬಿದ್ದಿದ್ದ ಮಧ್ಯಮ ಕ್ರಮಾಂಕದ ಆಟಗಾರ ಅಜಿಂಕ್ಯ ರಹಾನೆ ಅವರನ್ನು ಫೈನಲ್ ತಂಡಕ್ಕೆ ಸೇರಿಸಲಾಗಿದೆ. ರಹಾನೆ ಅವರು 15 ತಿಂಗಳ ಬಳಿಕ ರಾಷ್ಟ್ರೀಯ ತಂಡದ ಕರೆ ಪಡೆದಿದ್ದಾರೆ. ಅಯ್ಯರ್ ಅಲಭ್ಯತೆಯ ಕಾರಣದಿಂದ ರಹಾನೆ ಅವರನ್ನು ಕರೆತರಲಾಗಿದೆ.

ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯವು ಜೂನ್ 7ರಂದು ಇಂಗ್ಲೆಂಡ್ ನ ಓವಲ್ ಮೈದಾನದಲ್ಲಿ ನಡೆಯಲಿದೆ. ಸತತ ಎರಡನೇ ಫೈನಲ್ ಆಡುತ್ತಿರುವ ಭಾರತವು ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ.

ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಲ್ ರಾಹುಲ್, ಕೆಎಸ್ ಭರತ್ (ವಿ.ಕೀ), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾದ್ಕತ್.

Advertisement
Advertisement

Udayavani is now on Telegram. Click here to join our channel and stay updated with the latest news.

Next