Advertisement

ಯಲ್ಲಾಪುರದಲ್ಲಿ ಕರಡಿ ದಾಳಿ: ವ್ಯಕ್ತಿಗೆ ಗಂಭೀರ ಗಾಯ

06:16 PM Sep 08, 2022 | Team Udayavani |

ಯಲ್ಲಾಪುರ: ತಾಲೂಕಿನ ಕಣ್ಣಿಗೇರಿಯ ಜನಶೆಟ್ಟಿಕೊಪ್ಪದಲ್ಲಿ ವ್ಯಕ್ತಿಯೊಬ್ಬರ ಕರಡಿ ದಾಳಿ ನಡೆಸಿ ತೀವ್ರ ಗಾಯಗೊಳಿಸಿದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.

Advertisement

ತೋಟದಲ್ಲಿ ಕೆಲಸ ಮಡುತ್ತಿದ್ದ ಸಂತೋಷ ಲಾರೆನ್ಸ್ ಸಿದ್ದಿ ಎನ್ನುವವರ ಮೇಲೆ ಕರಡಿ ದಾಳಿ ನಡೆಸಿದ್ದು ತಪ್ಪಿಸಿಕೊಳ್ಳಲು ಹರಸಾಹಸ ಮಾಡಿದ್ದಾರೆ. ಆದರೂ ಕೆನ್ನೆಯ ಮತ್ತು ತಲೆ ಭಾಗಕ್ಕೆ ಕರಡಿ ಬಾಯಿ ಹಾಕಿ ಮಾಂಸ ಹರಿದಿದೆ. ರಕ್ತದ ಮಡುವಿನಲ್ಲಿದ್ದ ಇವರನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು ನಂತರ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಗೆ ಒಯ್ಯಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next