Advertisement

ಬಂಟ್ವಾಳದಲ್ಲಿ ಜೇನು ನೊಣ ದಾಳಿ: 9 ಮಂದಿ ಗಂಭಿರ

12:50 PM Feb 27, 2022 | Team Udayavani |

ಬಂಟ್ವಾಳ: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದವರಿಗೆ ಜೇನು ನೊಣ ದಾಳಿ ನಡೆಸಿ, ಗಂಭೀರ ಸ್ಥಿತಿಯಲ್ಲಿ ಒಂಬತ್ತು ಮಂದಿ ಆಸ್ಪತ್ರೆಗೆ ದಾಖಲಾದ ಘಟನೆ ಕಲಾಬಾಗಿಲು ಎಂಬಲ್ಲಿ ನಡೆದಿದೆ.

Advertisement

ಕಲಾಬಾಗಿಲು ನಿವಾಸಿಗಳಾದ ಗಂಗಯ್ಯ ಗೌಡ (60) ಶೀನ ಶೆಟ್ಟಿ (48) ಐತಪ್ಪ ಶೆಟ್ಟಿ (76) ಅರುಣ್ ಶೆಟ್ಟಿ (34) ಲಲಿತಾ ,(49) ಎಂಬವರ ಜೊತೆ ಉಳಿದ ನಾಲ್ವರು ಜೇನು ನೊಣ ಕಚ್ಚಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.  ನಾಲ್ವರ ಹೆಸರು ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ.

ಇರ್ವತ್ತೂರು ಗ್ರಾಮದ ಕಲಾಬಾಗಿಲು ಎಂಬಲ್ಲಿ ಅಲ್ಲಿನ ಸ್ಥಳೀಯ ನಿವಾಸಿಗಳು ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮೀಟಿಂಗ್ ಗೆಂದು ತೆರಳುವ ವೇಳೆ ಜೇನು ನೊಣಗಳು ಏಕಾಏಕಿ ದಾಳಿ ನಡೆಸಿವೆ.

ಇದನ್ನೂ ಓದಿ:ಉಡುಪಿಗೂ ಒಳ ಚರಂಡಿ: ಮುಂದಿನ ಬಜೆಟ್‌ನಲ್ಲಿ ಯೋಜನೆಗೆ ಹಣ ಸಿಗಲಿ

ನೊಣಗಳ ಗೂಡಿಗೆ ಗಿಡುಗ ಕಚ್ಚಿದ ಪರಿಣಾಮ ಕೋಪಗೊಂಡ ಜೇನು ನೊಣಗಳು ದಾರಿಯಲ್ಲಿ ಹೋಗುವ ಅಮಾಯಕರ ಮೇಲೆ ದಾಳಿ ಮಾಡಿದೆ.

Advertisement

ಗಾಯಗೊಂಡ ಐವರನ್ನು ಕೂಡ ಪುಂಜಾಲಕಟ್ಟೆ ಆಸ್ಪತ್ರೆಯ 108 ಅಂಬ್ಯುಲೆನ್ಸ್ ಚಾಲಕ ಜಗನ್ನಾಥ್ ಶೆಟ್ಟಿ ಅವರು ಸಕಾಲದಲ್ಲಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಐವರಿಗೂ ಚಿಕಿತ್ಸೆ ನೀಡಲಾಗಿದ್ದು ಯಾವುದೇ ಪ್ರಾಣಾಪಾಯವಿಲ್ಲ ಎಂದು ಅವರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next