Advertisement

ಕರಡಿ ದಾಳಿ : ವ್ಯಕ್ತಿಗೆ ಗಂಭೀರ ಗಾಯ, ಗದ್ದೆ ಕೆಲಸ ಮುಗಿಸಿ ವಾಪಸ್ಸಾಗುವ ವೇಳೆ ಘಟನೆ

02:56 PM Aug 01, 2022 | Team Udayavani |

ಭಟ್ಕಳ: ತಾಲೂಕಿನ ಉತ್ತರಕೊಪ್ಪದ ಚಿಕ್ಕನಹಳ್ಳಿ ಗ್ರಾಮದಲ್ಲಿ ವ್ಯಕ್ತಿಯೋರ್ವ ಕರಡಿ ದಾಳಿಗೊಳಗಾಗಿದ್ದು ತೀವ್ರವಾಗಿ ಗಾಯಗೊಂಡಿರುವ ಈತನಿಗೆ ಇಲ್ಲಿನ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Advertisement

ಕರಡಿ ದಾಳಿಗೊಳಗಾಗಿರುವ ವ್ಯಕ್ತಿಯನ್ನು ಉತ್ತರಕೊಪ್ಪದ ಚಿಕ್ಕನಹಳ್ಳಿಯ ನಿವಾಸಿ ರಾಮಚಂದ್ರ ನಾರಾಯಣ ನಾಯ್ಕ ಎಂದು ಗುರುತಿಸಲಾಗಿದೆ.

ಈತನು ಸೋಮವಾರ ಬೆಳಿಗೆ ಎಂದಿನಂತೆ ಗದ್ದೆ ಕೆಲಸವನ್ನು ಮುಗಿಸಿ ಮನೆಯ ಕಡೆಗೆ ವಾಪಾಸು ಬರುತ್ತಿದ್ದಾಗ ದಾರಿಯಲ್ಲಿ ಅಡ್ಡ ಬಂದ ಎರಡು ಕರಡಿಗಳು ಈತನ ಮೇಲೆ ದಾಳಿ ಮಾಡಿವೆ ಎನ್ನಲಾಗಿದೆ. ಕರಡಿ ದಾಳಿಯಿಂದ ತಪ್ಪಿಸಿಕೊಂಡು ಹೋದ ಈತನನ್ನು ಗ್ರಾಮಸ್ಥರು ತಕ್ಷಣ ತಾಲೂಕು ಆಸ್ಪತ್ರೆಗೆ ತಂದು ದಾಖಲಿಸಿದ್ದಾರೆ.

ಕರಡಿಗಳ ದಾಳಿಯಿಂದ ಈತನ ತಲೆ, ಮುಖದ ಭಾಗ, ಕೈ ಹಾಗೂ ಕಾಲುಗಳಿಗೆ ತೀವ್ರ ಗಾಯಗಳಾಗಿದೆ. ತಾಲೂಕು ಆಸ್ಪತ್ರೆಯ ವೈದ್ಯರು ಗಾಯಗೊಂಡ ರಾಮಚಂದ್ರ ನಾಯ್ಕ ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ.

ಇದನ್ನೂ ಓದಿ : ಭೋವಿ ಸಮುದಾಯಕ್ಕಾಗಿ ಕಲ್ಲು,ಮಣ್ಣು ಗಣಿಗಾರಿಕೆ ಕಾನೂನಿಗೆ ತಿದ್ದುಪಡಿ: ಸಿಎಂ ಬೊಮ್ಮಾಯಿ

Advertisement
Advertisement

Udayavani is now on Telegram. Click here to join our channel and stay updated with the latest news.

Next