Advertisement

ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕರಡಿ ದಾಳಿ: ರೈತನಿಗೆ ಗಂಭೀರ ಗಾಯ

08:10 PM Aug 08, 2021 | Team Udayavani |

ಹಾವೇರಿ: ರೈತರೊಬ್ಬರ ಮೇಲೆ ಕರಡಿ ದಾಳಿ ನಡಿಸಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ಶಿಗ್ಗಾವಿ ತಾಲೂಕಿನ ದುಂಡಶಿ‌ ಗ್ರಾಮದ ರವಿವಾರ ನಡೆದಿದೆ.

Advertisement

ಮಹಾವೀರ ಧರ್ಮಪ್ಪ ದಿಪ್ಪಣ್ಣನವರ (55) ವರ್ಷ ಗಂಭೀರ ಗಾಯಗೊಂಡ ರೈತ. ತನ್ನ ಜಮೀನಿನಲ್ಲಿ ಕೆಲಸಕ್ಕೆ ಹೋದ ವೇಳೆ ಕರಡಿ ಏಕಾಏಕಿ ದಾಳಿ ನಡೆಸಿ ರೈತನ ಮುಖ,ತಲೆ, ಮೈಮೇಲೆ ಮನಬಂದಂತೆ ಕಚ್ಚಿ ಗಾಯಗೊಳಿಸಿದೆ.

ಹೆಚ್ಚಿನ ಚಿಕಿತ್ಸೆಗಾಗಿ ಗಾಯಾಳು ರೈತನನ್ನು 108 ಅಂಬ್ಯುಲೆನ್ಸ್ ‌ಮೂಲಕ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಕಳುಹಿಸಿ ಕೊಡಲಾಗಿದೆ.

ಇದನ್ನೂ ಓದಿ :ಜಡ್ಜ್ ಗಳ ಅವಹೇಳನ: ಸಿಬಿಐನಿಂದ ಐವರ ಬಂಧನ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next