Advertisement

Arrested: ಮೆಟ್ರೋ ಸಿಬ್ಬಂದಿ ಮೇಲೆ ಬಿಯರ್‌ ಬಾಟಲಿಯಿಂದ ಹಲ್ಲೆ; ಮೂವರ ಸೆರೆ

10:26 AM Oct 08, 2024 | Team Udayavani |

ಬೆಂಗಳೂರು: ಮದ್ಯದ ಅಮಲಿನಲ್ಲಿ ಕಾಡುಗೋಡಿ ಟ್ರೀ ಪಾರ್ಕ್‌ ಮೆಟ್ರೋ ನಿಲ್ದಾಣದ ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಮೂವರು ಆರೋಪಿ ಗಳನ್ನು ಕಾಡುಗೋಡಿ ಠಾಣೆ ಪೊಲೀಸರು ಸೋಮವಾರ ಬಂಧಿಸಿದ್ಧಾರೆ.

Advertisement

ಸ್ಥಳೀಯ ನಿವಾಸಿಗಳಾದ ಮೊಹ್ಮದ್‌ ಐಡ್ರೀಸ್‌(25), ಶ್ರೀಶೈಲ (28), ಮಡಿವಾಳಪ್ಪ(27) ಬಂಧಿತರು. ತಲೆಮರೆಸಿಕೊಂಡಿರುವ ವೀರೇಶ್‌(30) ಎಂಬಾತನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.

ಭಾನುವಾರ ಸಂಜೆ 7 ಗಂಟೆ ಸುಮಾರಿಗೆ ನಾಲ್ವರು ಆರೋಪಿಗಳು ಕಾಡುಗೋಡಿ ಟ್ರೀ ಪಾರ್ಕ್‌ ಮೆಟ್ರೋ ನಿಲ್ದಾಣಕ್ಕೆ ಬಂದಿದ್ದು, ಪ್ರವೇಶ ದ್ವಾರದಲ್ಲಿದ್ದ ಭದ್ರತಾ ಸಿಬ್ಬಂದಿ ನಾಲ್ವರ ತಪಾಸಣೆ ನಡೆಸಿದ್ದಾರೆ. ಆಗ ಇಬ್ಬರು ಮದ್ಯ ಸೇವಿಸಿರುವುದು ಕಂಡು ಬಂದಿದೆ. ಕೂಡಲೇ ಭದ್ರತಾ ಸಿಬ್ಬಂದಿ ಪ್ರವೇಶ ನಿರಾಕರಿಸಿದ್ದಾರೆ. ಅದರಿಂದ ಕೋಪಗೊಂಡ ಆರೋಪಿಗಳು ಗಲಾಟೆ ಆರಂಭಿಸಿದ್ದಾರೆ. ಜತೆಗೆ ಸೆಕ್ಯೂರಿಟಿ ಮೇಲೆ ಹಲ್ಲೆ ನಡೆಸಿದ್ದಾರೆ.

ಈ ವೇಳೆ ಇತರೆ ಭದ್ರತಾ ಸಿಬ್ಬಂದಿ ಐಡ್ರೀಸ್‌ನನ್ನು ಹಿಡಿದುಕೊಳ್ಳಲಾಗಿದೆ. ಆಗ ಇತರೆ ಮೂವರು ಪರಾರಿಯಾಗಿದ್ದರು.  ಮೆಟ್ರೊ ನಿಲ್ದಾಣದಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮೆರಾಗಳಲ್ಲಿ ಗಲಾಟೆಯ ದೃಶ್ಯ ಸೆರೆಯಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next