Advertisement

ಕುಳಗೇರಿ ಕ್ರಾಸ್: ಭಂಡಾರಮಯ ಬೀರದೇವರ ಜಾತ್ರೆ

02:22 PM Oct 28, 2022 | Team Udayavani |

ಕುಳಗೇರಿ ಕ್ರಾಸ್: ಎಲ್ಲಿ ನೋಡಿದರಲ್ಲಿ ಭಂಡಾರ… ಹಳದಿ ಬಣ್ಣದ ಚಿತ್ತಾರ… ಚಾಂಗಭಲ… ಚಾಂಗಭಲ… ಚಾಂಗಭಲ… ಎಂಬ ಘೋಷಣೆಯ ಹರ್ಷೋಧ್ಘಾರ. ಡೊಳ್ಳಿನ ಕೈಪೆಟ್ಟು… ಆರತಿ ಹಿಡಿದು ಹಾಡು ಹಾಡುತ್ತ ಸಾಗಿದ ಮಹಿಳೆಯರು… ತಾಳ-ಮದ್ದಳೆಗಳ ವಾದ್ಯದೊಂದಿಗೆ ಕುಳಗೇರಿ ಗ್ರಾಮ ಭಕ್ತರಿಂದ ತುಂಬಿ ತುಳಕಿತ್ತು.

Advertisement

ಹೌದು ಇದೆಲ್ಲ ಬಾದಾಮಿ ತಾಲೂಕಿನ ಕುಳಗೇರಿ ಗ್ರಾಮದ ಭಂಡಾರಮಯ ಬೀರದೇವರ ಜಾತ್ರೆಯಲ್ಲಿ ಕಂಡು ಬಂದ ದೃಷ್ಯ. ಈ ಬೀರೇಶನ ಜಾತ್ರೆಯಲ್ಲಿ ಹರಕೆ ಹೊತ್ತ ಭಕ್ತರು ಪ್ರತಿ ವರ್ಷವೂ ಬೇಡಿಕೊಂಡಷ್ಟು ಚೀಲಗಟ್ಟಲೇ ಭಂಡಾರ ತೂರಿ ದೇವರಿಗೆ ನಮಿಸುತ್ತಾರೆ. ಬೇಡಿಕೆ ಇಡೇರಯತ್ತೆ ಎಂಬ ನಂಬಿಕೆ ಇಟ್ಟ ಭಕ್ತರು ನೂರಾರು ಚೀಲ ಭಂಡಾರ ಎರಚುತ್ತಾರೆ. ಹಿಗೆ ಈ ಜಾತ್ರೆಯಲ್ಲಿ ಪಾಲ್ಗೊಂಡಿದ್ದ ಸಾವಿರಾರು ಭಕ್ತರು ಉತ್ತತ್ತಿ, ಬಾಳೆ, ಭಂಡಾರ ಎರಚಿ ಭಕ್ತಿ ಭಾವದಿಂದ ಸಮಿರ್ಪಿಸಿದರು.

ಜಾತ್ರೆಯ ಅಂಗವಾಗಿ ಬರಮದೇವರ ಹಬ್ಬ. ಪಲ್ಲಕ್ಕಿ ಉತ್ಸವ, ವಾಹನೋತ್ಸವ ಹಾಗೂ ದೀಪೋತ್ಸವ, ರಾತ್ರಿ ಡೊಳ್ಳಿನ ಪದಗಳು, ಪುಷ್ಪಪೂಜಾ ಕಾರ್ಯಕ್ರಮ ನಡೆದವು. ಜಾತ್ರೆಗೆ ಬಂದ ಭಕ್ತರಿಗೆ ನಿರಂತರ ಅನ್ನ ಸಂತರ್ಪಣೆ ಸೇರಿ ಮನೋರಂಜನೆ ಕಾರ್ಯಕ್ರಮಗಳು ನಡೆದವು.

Advertisement

Udayavani is now on Telegram. Click here to join our channel and stay updated with the latest news.

Next