Advertisement

ಹೆಜ್ಜೇನಿಗೆ ಕಲ್ಲೆಸೆದ ಕಿಡಿಗೇಡಿಗಳು 20ಕ್ಕೂ ಹೆಚ್ಚು ಜನರ ಮೇಲೆ ದಾಳಿ

07:38 PM Dec 15, 2019 | sudhir |

ವಿಜಯಪುರ : ಕಿಡಿಗೇಡಿಗಳು ಕಲ್ಲೆಸೆದ ಪರಿಣಾಮ ಹೆಜ್ಜೇನು ದಾಳಿ ನಡೆಸಿ ಮಕ್ಕಳು, ಮಹಿಳೆಯರು ಸೇರಿ 20ಕ್ಕೂ ಹೆಚ್ಚು ಜನ ಗಾಯಗೊಂಡ ಘಟನೆ ಮುದ್ದೇಬಿಹಾಳ ಪಟ್ಟಣದಲ್ಲಿ‌ ನಡೆದಿದೆ .

Advertisement

ಮುದ್ದೇಬಿಹಾಳ ಎಪಿಎಂಸಿ ಪಕ್ಕದಲ್ಲಿರುವ ಸಂತೆ ಬಜಾರನಲ್ಲಿ ರವಿವಾರ ಸಂತೆ ನಡೆಯುತ್ತಿದ್ದ ಸಂದರ್ಭದಲ್ಲಿ ಕಿಡಿಗೇಡಿಗಳು ಕಲ್ಲು ಎಸೆದ ಪರಿಣಾಮ ರೊಚ್ಚಿಗೆದ್ದ ಹೆಜ್ಜೇನು ಹುಳುಗಳು ಸಂತೆಗೆ ಬಂದವರ ಮೇಲೆ ದಾಳಿ ನಡೆಸಿವೆ.

ಹೆಜ್ಜೇನು ದಾಳಿಯಿಂದ ಮಹಿಳೆಯರು, ಮಕ್ಕಳು ಅಸ್ವಸ್ಥರಾಗಿ‌‌ ಕಿರುಚಾಟ ಆರಂಭಿಸಿದಾಗ ಸ್ಥಳಕ್ಕೆ ಧಾವಿಸಿದ ಸ್ಥಳೀಯರು. 7-8 ಜನರನ್ನು ಸ್ಥಳೀಯ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ಕೊಡಿಸಲು ಮುಂದಾಗಿದ್ದಾರೆ.

ಆದರೆ ಹೆಜ್ಜೇನು ದಾಳಿಯಿಂದ ಗಾಯಗೊಂಡವರಿಗೆ ಚಿಕಿತ್ಸೆ ನೀಡಬೇಕಾದ ಕರ್ತವ್ಯದ ಮೇಲಿದ್ದ ಅಧಿಕಾರಿ ಆಸ್ಪತ್ರೆಯಲ್ಲಿ ಇರಲಿಲ್ಲ. ಇದರಿಂದಾಗಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು. ವಿಷಯ ತಿಳಿದ ರಾತ್ರಿ ಕರ್ತವ್ಯ ಮಾಡಿ ಮನೆಗೆ ತೆರಳಿದ್ದ ವೈದ್ಯ ಡಾ.ಸಂಗಮೇಶ ಪಟ್ಟಣದ ಆಸ್ಪತ್ರೆಗೆ ಆಗಮಿಸಿ ಚಿಕಿತ್ಸೆ ನೀಡಿದ್ದಾರೆ. ಸದ್ಯ ಗಾಯಾಳುಗಳ ಪರಿಸ್ಥಿತಿಯಲ್ಲಿ ಚೇತರಿಕೆ ಕಂಡುಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next