Advertisement

26ರಿಂದ ತೊಗರಿ ಖರೀದಿ ಆರಂಭ: ಪಾಟೀಲ

07:10 AM Dec 21, 2017 | Team Udayavani |

ಕಲಬುರಗಿ: ಪ್ರಸಕ್ತ ಸಾಲಿನಲ್ಲೂ ತೊಗರಿ ಬೆಳೆದ ರೈತರಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಆದೇಶದಂತೆ ಡಿ.26ರಿಂದ ಕೇಂದ್ರ 5450 ರೂ. ಮತ್ತು ರಾಜ್ಯ ಸರ್ಕಾರದ 550 ರೂ. ಸಹಾಯ ಧನ ಸೇರಿ ಪ್ರತಿ ಕ್ವಿಂಟಲ್‌ಗೆ ಒಟ್ಟು 6 ಸಾವಿರ ರೂ. ಗಳಂತೆ 1.65 ಲಕ್ಷ ಟನ್‌ ತೊಗರಿ ಖರೀದಿ ಪ್ರಕ್ರಿಯೆ ಆರಂಭಗೊಳ್ಳಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ತಿಳಿಸಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಬಾರಿ ಪ್ರತಿ ರೈತರಿಂದ ಕೇವಲ 20 ಕ್ವಿಂಟಲ್‌ ತೊಗರಿ ಖರೀದಿಸಲು ನಿರ್ಧರಿಸಲಾಗಿದೆ. ಕಳೆದ ವರ್ಷ ನ್ಯಾಫೆಡ್‌ ಮೂಲಕ ಖರೀದಿಸಿರುವ ತೊಗರಿ ಇನ್ನೂ ರಾಜ್ಯದ ಗೋದಾಮುಗಳಲ್ಲಿಯೇ ಇದೆ. ಇಂತಹ ಪರಿಸ್ಥಿತಿಯಲ್ಲಿ ಕೇಂದ್ರ ಸರ್ಕಾರದ ನಿರ್ದೇಶನದಂತೆ ಖರೀದಿ ಮಾಡಲಾಗುತ್ತಿದೆ ಎಂದರು.

ಕಲಬುರಗಿ, ವಿಜಯಪುರ, ಯಾದಗಿರಿ, ಬೀದರ್‌ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ತೊಗರಿ ಖರೀದಿ ಕೇಂದ್ರಗಳು ಆರಂಭವಾಗಲಿವೆ. ತೊಗರಿಯನ್ನು 8.85 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆಯಲಾಗಿದ್ದು, 7.08 ಲಕ್ಷ ಮೆಟ್ರಿಕ್‌ ಟನ್‌ ಉತ್ಪಾದನೆ ನಿರೀಕ್ಷಿಸಲಾಗಿದೆ. ತೊಗರಿ ಖರೀದಿಗೆ ರೈತರಿಗೆ ಹಣ ಪಾವತಿಸಲು ಆವರ್ತ ನಿ ಧಿಯಿಂದ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಕ್ಕೆ 25 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next