Advertisement

ಜಾರಕಿಹೊಳಿ ಸಮಸ್ಯೆ ನಿವಾರಣೆ ಹೊಣೆ ಸಿದ್ದುಗೆ

06:05 AM Oct 14, 2018 | |

ಬೆಂಗಳೂರು: ಪೌರಾಡಳಿತ ಸಚಿವ ರಮೇಶ್‌ ಜಾರಕಿಹೊಳಿಯವರು ಪಕ್ಷದ ವಿರುದ್ಧ ಬಂಡಾಯ ಎದ್ದು ಎಲ್ಲ ಗೊಂದಲ ನಿವಾರಣೆಯಾಗಿದೆ ಎಂದು ಹೇಳಿದರೂ, ಸಚಿವ ಸಂಪುಟ ಸಭೆ ಹಾಗೂ ಪಕ್ಷದ ಚಟುವಟಿಕೆಗಳಲ್ಲಿ ಪಾಳೊಳ್ಳದಿರುವ ಬಗ್ಗೆ ರಾಹುಲ್‌ ಗಾಂಧಿ ಅವರಿಗೆ ಕೆ.ಸಿ.ವೇಣುಗೋಪಾಲ್‌ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.

Advertisement

ಈ ಸರ್ಕಾರದಲ್ಲಿ ನಾಯಕ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಸಿಎಂ ಕುಮಾರಸ್ವಾಮಿ ಹಾಗೂ ಪಕ್ಷದ ನಾಯಕರ ವಿರುದ್ಧ ಬಂಡಾಯ ಎದ್ದು ರಾಜೀನಾಮೆ ನೀಡುವ ಹಂತಕ್ಕೆ ಹೋಗಿದ್ದರು. ನಂತರ, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಾತುಕತೆ ನಡೆಸಿ ಬಂಡಾಯ ಶಮನಗೊಳಿಸುವ ಪ್ರಯತ್ನ ನಡೆಸಿದ್ದರು.

ಆದರೂ, ರಮೇಶ್‌ ಜಾರಕಿಹೊಳಿ ತಮ್ಮ ಬೇಡಿಕೆ ಪೂರ್ಣಗೊಳ್ಳುವವರೆಗೂ ಸಂಪುಟ ಸಭೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಹೇಳಿದ್ದರು. ಅಲ್ಲದೆ, ಶನಿವಾರ ವೇಣುಗೋಪಾಲ್‌ ಕರೆದ ಸಭೆಗೂ ಹಾಜರಾಗದೆ ದೂರ ಉಳಿದಿದ್ದರು.

ಈ ಹಿನ್ನೆಲೆಯಲ್ಲಿ ವೇಣುಗೋಪಾಲ್‌ ಅವರು, ರಾಹುಲ್‌ ಗಾಂಧಿ ಎದುರು ದೂರು ನೀಡಿದ್ದರು ಎನ್ನಲಾಗಿದೆ. ಅವರ ಸಮಸ್ಯೆಯನ್ನು ಬಗೆಹರಿಸುವಂತೆ ಸಿದ್ದರಾಮಯ್ಯ ಅವರಿಗೆ ರಾಹುಲ್‌ ಗಾಂಧಿ ಸೂಚಿಸಿದರು ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next