Advertisement

Belagavi: ಕರಾಳ ದಿನ ಆಚರಿಸುವ ಎಂಇಎಸ್‌ ಯೋಜನೆಗೆ ಅಡ್ಡಿಯಾದ ಬೆಳಗಾವಿ ಜಿಲ್ಲಾಧಿಕಾರಿ

05:04 PM Oct 15, 2024 | Team Udayavani |

ಬೆಳಗಾವಿ: ನವೆಂಬರ್ 1 ಕರ್ನಾಟಕ ರಾಜ್ಯೋತ್ಸವದಂದು ಕರಾಳ‌ ದಿನ ಆಚರಿಸಲು ಅನುಮತಿ ನೀಡುವಂತೆ ಆಗ್ರಹಿಸಿ ಮನವಿ‌ ಸಲ್ಲಿಸಲು ಬಂದಿದ್ದ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಮುಖಂಡರಿಗೆ ಜಿಲ್ಲಾಧಿಕಾರಿ ಮೊಹ್ಮದ್ ರೋಷನ್ ಅನುಮತಿ ನೀಡುವುದಿಲ್ಲ ಎಂದು ಕಡ್ಡಿ ಮುರಿದಂತೆ ಹೇಳಿ ವಾಪಾಸ್ ಕಳುಹಿಸಿದ್ದಾರೆ.

Advertisement

ನವೆಂಬರ್ 1 ರಂದು ಕರಾಳ ದಿನ ಆಚರಿಸಲು ಅನುಮತಿ ನೀಡುವಂತೆ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಎಂಇಎಸ್ ಮುಖಂಡರು ಮನವಿ ಸಲ್ಲಿಸಿದರು. ಆದರೆ ಯಾವುದೇ ಕಾರಣಕ್ಕೂ ಈ ಬಾರಿ ಕರಾಳ ದಿನಾಚರಣೆಗೆ ಅನುಮತಿಯಿಲ್ಲ ಎಂದು ಹೇಳಿ ಕಳುಹಿಸಿದ್ದಾರೆ.

ಮಹಾರಾಷ್ಟ್ರ ಏಕೀಕರಣ ಸಮಿತಿ ಮುಖಂಡ, ಮಾಜಿ ಶಾಸಕ ಮನೋಹರ ಕಿಣೇಕರ ನೇತೃತ್ವದಲ್ಲಿ ಮಂಗಳವಾರ ಬೆಳಗಾವಿ ಜಿಲ್ಲಾಧಿಕಾರಿ ಮೊಹ್ಮದ್ ರೋಷನ್ ಅವರನ್ನು ಭೇಟಿ ಮಾಡಿ ಕರಾಳ ದಿನದ ಮಾಹಿತಿ ನೀಡಿ ಅನುಮತಿಗಾಗಿ ಮನವಿ ಸಲ್ಲಿಸಿತು. ಈ ವೇಳೆ ಜಿಲ್ಲಾಧಿಕಾರಿಗಳು ಮತ್ತು ಎಂ.ಇ.ಎಸ್ ಪದಾಧಿಕಾರಿಗಳ ಮಧ್ಯೆ ಚರ್ಚೆ ನಡೆಯಿತು. ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ರಾಜ್ಯೋತ್ಸವ ಆಚರಣೆಗೆ ತೊಂದರೆಯಾಗದಂತೆ ಕರಾಳ ದಿನವನ್ನು ಆಚರಿಸಲು ಅನುಮತಿ ನೀಡಬೇಕೆಂದು ಒತ್ತಾಯಿಸಲಾಯಿತು. ಆದರೆ ಇದಕ್ಕೆ‌ ಒಪ್ಪದ ಜಿಲ್ಲಾಧಿಕಾರಿಗಳು ವಾಪಸ್ ಕಳುಹಿಸಿದ್ದು, ಬಂದ ದಾರಿಗೆ ಸುಂಕ ಇಲ್ಲ ಎಂಬಂತೆ ಹೋಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next